ಬೆಂಗಳೂರು, ಫೆಬ್ರವರಿ 6, 2026 : ಕೂಡ್ಲು ಕೆರೆ ಸಮೀಪ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್ಗೆ ಬೆಂಕಿ ಬಿದ್ದು 100ಕ್ಕೂ ಹೆಚ್ಚು ಶೆಡ್ಗಳು ಹೊತ್ತಿ ಉರಿದ ಘಟನೆ ಜರುಗಿದೆ.
ಇಂದು ಬೆಳಗ್ಗಿನ ಜಾವ 5:30 ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ವಿಷಯ ತಿಳಿದ ತಕ್ಷಣ ಎಲೆಕ್ಟ್ರಾನಿಕ್ ಸಿಟಿ , ಹುಳಿಮಾವು , ಸರ್ಜಾಪುರ ಹಾಗು ಡೈರಿ ಸರ್ಕಲ್ನಿಂದ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೈ ಟೆನ್ಷನ್ ವಯರ್ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶೆಡ್ ಗಳು ಹಾಗು ಸ್ಕ್ರಾಪ್ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
