ಒಂದು ದಿನದ ಹಿಂದಿನ ಬಿರಿಯಾನಿ ತಿಂದು 17 ಜನ ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ (ಮಂಗಳವಾರ) ನಡೆದಿದೆ. ಚಿಕ್ಕಮಗಳೂರಿನ ತಾಲ್ಲೂಕಿನ ಮರವಂಜಿ ಗ್ರಾಮದ ಮಂಜಪ್ಪ ಎನ್ನುವರ ಮನೆಯಲ್ಲಿ ಖಾಸಗಿ ಕಾರ್ಯಕ್ರಮವೊಂದು ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಿದ್ದರು. ಭಾನುವಾರ ಮಾಡಿದ್ದ ಬಿರಿಯಾನಿಯನ್ನ ಸೋಮವಾರ ತಿಂದ 17 ಜನ ಗ್ರಾಮಸ್ಥರು ಅಸ್ವಸ್ಥರಾಗಿ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
![](https://www.prathinidhi.net/wp-content/uploads/2023/11/17-people-fall-sick-after-consuming-biryani-in-chikmagalur.webp)