PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಆರ್ಥಿಕ ಸಂಕಷ್ಟಕ್ಕೊಳಗಾದ ಕೇರಳಕ್ಕೆ ಪ್ರಧಾನಿ ಸಹಾಯಹಸ್ತ; ಕೇಂದ್ರದಿಂದ 21,253 ಕೋಟಿ ರೂ ನೆರವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಆರ್ಥಿಕ ಸಂಕಷ್ಟಕ್ಕೊಳಗಾದ ಕೇರಳಕ್ಕೆ ಪ್ರಧಾನಿ ಸಹಾಯಹಸ್ತ; ಕೇಂದ್ರದಿಂದ 21,253 ಕೋಟಿ ರೂ ನೆರವು
ಮುಖಪುಟಸಮಗ್ರ

ಆರ್ಥಿಕ ಸಂಕಷ್ಟಕ್ಕೊಳಗಾದ ಕೇರಳಕ್ಕೆ ಪ್ರಧಾನಿ ಸಹಾಯಹಸ್ತ; ಕೇಂದ್ರದಿಂದ 21,253 ಕೋಟಿ ರೂ ನೆರವು

Prathinidhi News
Last updated: May 27, 2024 1:36 pm
Prathinidhi News
Published May 27, 2024
Share
SHARE

ನವದೆಹಲಿ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಕೇರಳಕ್ಕೆ ಪ್ರಧಾನಿ ನರೇಂದ್ರ ಮೋದಿ ನೆರವಿನ ಹಸ್ತ ಚಾಚಿದ್ದಾರೆ. ಕೇಂದ್ರ ಸರ್ಕಾರದಿಂದ ಕೇರಳಕ್ಕೆ 21,253 ರೂಗಳ ನೆರವಿನ ಪ್ಯಾಕೇಜ್ ಅನ್ನು ನೀಡಲಾಗಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆ ರಾಜ್ಯ ಸಚಿವರಾದ ಕೇರಳ ಮೂಲದ ರಾಜೀವ್ ಚಂದ್ರಶೇಖರ್ ಅವರು ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಈ ವಿಷಯವನ್ನು ಪ್ರಕಟಿಸಿದ್ದು, ಕೇಂದ್ರದ ಸಹಾಯ ಧನವನ್ನು ಸರಿಯಾಗಿ ವಿನಿಯೋಗಿಸಿ ಎಂದು ಕೇರಳ ಸಿಎಂ ಪಿಣಾರಯಿ ವಿಜಯನ್ ಅವರನ್ನು ಆಗ್ರಹಿಸಿದ್ದಾರೆ.

Contents
ಫಂಡ್​ಗಳನ್ನು ಉಪಯೋಗಿಸಿ ಈ ಕೆಲಸ ಮಾಡಿ: ರಾಜೀವ್ನಮ್ಮ ತೆರಿಗೆ ಪಾಲು ನಮಗೆ ಕೊಡಿ ಎನ್ನುತ್ತಿರುವ ಕೇರಳ ಸರ್ಕಾರ

ಕೇರಳದ ಆರ್ಥಿಕ ಬಿಕ್ಕಟ್ಟಿನ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ನೆರವಾಗಿದೆ. 2024ರವರೆಗೆ 21,253 ಕೋಟಿ ರೂಗಳವರೆಗೆ ಸಾಲಗಳನ್ನು ಸರ್ಕಾರ ಮಂಜೂರು ಮಾಡಿದೆ. ಈ ಹಣವನ್ನು ಯಾವ ಭ್ರಷ್ಟಾಚಾರ, ಸೋರಿಕೆ ಇಲ್ಲದೇ ಕೇರಳ ಜನರ ಕಲ್ಯಾಣಕ್ಕೆ ಸರಿಯಾಗಿ ವಿನಿಯೋಗಿಸಬೇಕು ಎಂದು ಸಿಎಂ ಪಿಣಾರಯಿ ವಿಜಯನ್ ಅವರನ್ನು ಆಗ್ರಹಿಸುತ್ತೇನೆ ಎಂದು ರಾಜೀವ್ ಚಂದ್ರಶೇಖರ್ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಫಂಡ್​ಗಳನ್ನು ಉಪಯೋಗಿಸಿ ಈ ಕೆಲಸ ಮಾಡಿ: ರಾಜೀವ್

  • ಕೇರಳ ಸಾರಿಗೆ ಸಂಸ್ಥೆಯ ಉದ್ಯೋಗಿಗಳು ಸೇರಿದಂತೆ ಇಲ್ಲಿನ ಸರ್ಕಾರಿ ನೌಕರರಿಗೆ ತಿಂಗಳುಗಳಿಂದ ಸರಿಯಾಗಿ ಸಂಬಳ ಆಗಿಲ್ಲ. ಇವರಿಗೆ ಸಂಬಳ ಮತ್ತು ಪಿಂಚಣಿ ಒದಗಿಸಿ.
  • ಕರಾವಳಿ ರಕ್ಷಣೆ ಮತ್ತು ಮಿನಿ ಹಾರ್ಬರ್ ಪ್ರಾಜೆಕ್ಟ್ ಅನ್ನು ಪೂರ್ಣಗೊಳಿಸಿ
  • ಸಿಪಿಒ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ
  • ತಿರುವನಂತಪುರಂನಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿ.

ಹೀಗೆಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಒತ್ತಾಯಿಸಿದ್ದಾರೆ.

ತಿರುವನಂತಪುರಂ ನಗರದಲ್ಲಿ ಪ್ರವಾಹ ನಿಯಂತ್ರಣ ವ್ಯವಸ್ಥೆ ನಿರ್ಮಿಸಲು 200 ಕೋಟಿ ರೂ ಯೋಜನೆಗೆ ಕೇಂದ್ರ ಸರ್ಕಾರ ನೆರವು ನೀಡುತ್ತಿದೆ. ಈ ಯೋಜನೆಯ ಪ್ರಸ್ತಾವ ಸಲ್ಲಿಸಲು ಮೇ 31 ಕೊನೆಯ ದಿನ. ಅಷ್ಟರೊಳಗೆ ಕೇರಳ ಸರ್ಕಾರ ಪ್ರಸ್ತಾಪ ಸಲ್ಲಿಸಲಿ ಎಂದು ಮತ್ತೊಂದು ಎಕ್ಸ್ ಪೋಸ್ಟ್​ನಲ್ಲಿ ಕೇಂದ್ರ ಸಚಿವರು ಒತ್ತಾಯಿಸಿದ್ದಾರೆ.

- ಜಾಹೀರಾತು -

ನಮ್ಮ ತೆರಿಗೆ ಪಾಲು ನಮಗೆ ಕೊಡಿ ಎನ್ನುತ್ತಿರುವ ಕೇರಳ ಸರ್ಕಾರ

ಕರ್ನಾಟಕ, ತಮಿಳುನಾಡು ಸರ್ಕಾರಗಳಂತೆ ಕೇರಳ ಸರ್ಕಾರ ಕೂಡ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ನೀತಿ ಬಗ್ಗೆ ಅಸಮಾಧಾನಗೊಂಡಿದೆ. ಕೇರಳದಿಂದ ಕೇಂದ್ರ ಸರ್ಕಾರಕ್ಕೆ ಹೋಗುತ್ತಿರುವ ಹಣ 11 ಪಟ್ಟು ಹೆಚ್ಚಾಗಿದೆ. ಅದಕ್ಕೆ ಬದಲಾಗಿ ತೆರಿಗೆ ಪಾಲು 8.8 ಪಟ್ಟು ಮಾತ್ರವೇ ಹೆಚ್ಚಾಗಿದೆ ಎಂದು ಕೇರಳ ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ತಗಾದೆ ತೆಗೆದಿದ್ದಾರೆ.

ಕೇರಳದಲ್ಲಿ ಸಾಮಾಜಿಕ ಯೋಜನೆಗಳಿಗೆ ವೆಚ್ಚ ಭರಿಸಲು ಹಣದ ಕೊರತೆ ಇದೆ. ಕನಿಷ್ಠ ಅಗತ್ಯತೆಯ ಸೇವೆ ಕೊಡಲೂ ಆಗುತ್ತಿಲ್ಲ. 62 ಲಕ್ಷ ಕುಟುಂಬಗಳಿಗೆ ಪಿಂಚಣಿ ಕೊಡಲು ದುಡ್ಡಿಲ್ಲ. ಕೇಂದ್ರ ಸರ್ಕಾರದಿಂದ ನಮ್ಮ ಪಾಲಿನ ಹಣ ಬರುತ್ತಿಲ್ಲದಿರುವುದು ಈ ಕಷ್ಟಕ್ಕೆ ಕಾರಣವಾಗಿದೆ ಎಂದು ಬಾಲಗೋಪಾಲ್ ಹೇಳಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟರಾಜಕೀಯಸನ್ನಿಧಾನಹಾಸನ

ಹಾಸನಾಂಬೆ ದೇವಿಯ ದರ್ಶನ ಪಡೆದ ಡಿಸಿಎಂ ಡಿ.ಕೆ. ಶಿವಕುಮಾರ್‌

October 15, 2025
ಬೆಂಗಳೂರುಮುಖಪುಟಸಿನಿಮಾ

ಬರ್ತ್‌ ಡೇ ಸಮಯದಲ್ಲೇ ಮದುವೆ ಬಗ್ಗೆ ಬಿಗ್‌ ಅಪ್ಡೇಟ್‌ ನೀಡಿದ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ..!

October 3, 2025
ಚುನಾವಣೆತುಮಕೂರುಮುಖಪುಟರಾಜಕೀಯ

ಅಪ್ಪಮಕ್ಕಳಿಗೆ ಸ್ವಹಿತಾಸಕ್ತಿಯೇ ಮುಖ್ಯ : ಬಿಎಸ್ ವೈ ವಿರುದ್ದ ಜೆ.ಸಿ ಮಾಧುಸ್ವಾಮಿ ಕಿಡಿ

March 15, 2024
ಮುಖಪುಟಮೈಸೂರು ನಗರರಾಜಕೀಯ

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆ

July 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?