PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದೇಶದ ಮೊದಲ ಯಕೃತ್ ಕಸಿಗೆ 25 ವರ್ಷ : ಯಕೃತ್ ಕಸಿಗೊಳಗಾದ ಮೊದಲ ಮಗು ಈಗ ವೈದ್ಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ದೇಶದ ಮೊದಲ ಯಕೃತ್ ಕಸಿಗೆ 25 ವರ್ಷ : ಯಕೃತ್ ಕಸಿಗೊಳಗಾದ ಮೊದಲ ಮಗು ಈಗ ವೈದ್ಯ
ಜಿಲ್ಲೆ

ದೇಶದ ಮೊದಲ ಯಕೃತ್ ಕಸಿಗೆ 25 ವರ್ಷ : ಯಕೃತ್ ಕಸಿಗೊಳಗಾದ ಮೊದಲ ಮಗು ಈಗ ವೈದ್ಯ

Prathinidhi News
Last updated: November 19, 2023 10:12 am
Prathinidhi News
Published November 19, 2023
Share
SHARE

ದೇಶದಲ್ಲೇ ಮೊದಲ ಯಕೃತ್ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದ ದಾಖಲೆಗೆ ಪಾತ್ರನಾಗಿದ್ದ 20 ತಿಂಗಳ ಬಾಲಕ ಸ೦ಜಯ್‌ ಶಕ್ತಿ ಇದೀಗ ಸ್ವತಃ ವೈದ್ಯ! ನಿಜ, ದೇಶದ ವೈದ್ಯಕೀಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ ಘಟನೆಗೆ ಇದೀಗ 25 ವರ್ಷ ತುಂಬಿದ್ದು, ಈ ನಿಮಿತ್ತ ಡಾ.ಸ೦ಜಯ್‌ ಶಕ್ತಿಯನ್ನು ದೆಹಲಿಯಲ್ಲಿ ಸನ್ಮಾನಿಸಲಾಗಿದೆ. ತನಗೆ ಮರುಜೀವ ಕೊಟ್ಟ ವೈದ್ಯಕೀಯ ರಂಗಕ್ಕೆ ಸೇರುವ ಕನಸು ಹೊತ್ತು ಅದನ್ನು ಈಡೇರಿಸಿಕೊಂಡಿದ್ದ ಸಂಜಯ್ ಶಕ್ತಿ, ಮೊದಲು ಬೆಂಗಳೂರಿನಲ್ಲಿ ವೈದ್ಯಕೀಯ ಸೇವೆ ಆರಂಭಿಸಿ ಇದೀಗ ತಮಿಳುನಾಡಿನ ಕಾಂಚೀಪುರಂನಲ್ಲಿ ವೈದ್ಯಕೀಯ ಸೇವೆ ನೀಡುತ್ತಿದ್ದಾರೆ. 10 ವೈದ್ಯರು ಮಾಡಿದ ಶಸ್ತ್ರಚಿಕಿತ್ಸೆಯಿಂದ ನಾನು ಮರುಜನ್ಮ ಪಡೆದಿದ್ದೇನೆ. ಅದೇ ಕಾರಣಕ್ಕೆ ನಾನೂ ಇನ್ನೊಬ್ಬರ ಜೀವ ಉಳಿಸುವ ವ್ಯಕ್ತಿಯಾಗಬೇಕೆಂದು ವೈದ್ಯನಾಗುವ ಕನಸು ಕಂಡಿದ್ದೆ. ಅದು ಈಗ ನನಸಾಗಿದೆ ಎಂದು ಡಾ. ಸಂಜಯ್ ಶಕ್ತಿ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಆರೋಗ್ಯ ಸಮಸ್ಯೆ: ಸಂಜಯ್ ಶಕ್ತಿಯ ಮೂಲ ಹೆಸರು ಕೇವಲ ಶಕ್ತಿ ಎಂದಾಗಿತ್ತು. ಶಕ್ತಿ ಹುಟ್ಟಿದಾಗ ಆತನಲ್ಲಿ ಜನನದ ವೇಳೆಯೇ ಬೈಲೈರಿ ಅಟ್ರೇಶಿಯಾ (biliary atresia) ಎಂಬ ಸಮಸ್ಯೆ ಕಾಣಿಸಿಕೊಂಡಿತ್ತು. ಅಂದರೆ ಯಕೃತ್‌ನಿಂದ ಪಿತ್ತಕೋಶಕ್ಕೆ ಪಿತ್ತರಸ ಸಾಗಿಸುವ ಮಾರ್ಗದಲ್ಲಿ ಅಡ್ಡಿ ಎದುರಾಗಿತ್ತು. ಈ ಸಮಸ್ಯೆ ನಿವಾರಿಸಲು 1998ರ ನ.15ರಂದು ದೆಹಲಿಯ ಅಪೋಲೋ ಆಸ್ಪತ್ರೆಯ ವೈದ್ಯರು ಯಕೃತ್ ಕಸಿ ಶಸ್ತ್ರಚಿಕಿತ್ಸೆ ನಡೆಸಿದ್ದರು. ಶಕ್ತಿಯ ತಂದೆಯ ಯಕೃತ್‌ನ ಸಣ್ಣ ಭಾಗವನ್ನು ಕತ್ತರಿಸಿ ಅದನ್ನು ಶಕ್ತಿಯ ದೇಹಕ್ಕೆ ಸೇರಿಸಲಾಗಿತ್ತು. ಈ ವೇಳೆ ಶಕ್ತಿ 2 ತಿಂಗಳು ಕಾಲ ಆಸ್ಪತ್ರೆಯಲ್ಲಿ ಐಸಿಯುನಲ್ಲೇ ಚಿಕಿತ್ಸೆ ಪಡೆದಿದ್ದರು.

ಈ ಚಿಕಿತ್ಸೆ ದೇಶದಲ್ಲೇ ಮೊತ್ತ ಮೊದಲಾಗಿದ್ದ ಕಾರಣ ಅದು ದೇಶವ್ಯಾಪಿ ಸುದ್ದಿಯಾಗಿತ್ತು. ಈ ಹಂತದಲ್ಲಿ ಶಕ್ತಿಗೆ ಆಸ್ಪತ್ರೆಯ ಸಿಬ್ಬಂದಿ ಸಂಜಯ್‌ ಎಂದು ಹೆಸರು ನೀಡಿದ್ದರು. ಬಳಿಕ ಆತನನ್ನು ಸಂಜಯ್ ಶಕ್ತಿ ಎಂದು ಕರೆಯಲಾಗುತ್ತಿತ್ತು. ಹೀಗೆ ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡ ಸಂಜಯ್‌ ಶಕ್ತಿಗೆ ಕೆಲವು ವರ್ಷಗಳಾದ ಬಳಿಕ ತಮ್ಮ ಹೊಟ್ಟೆಯ ಮೇಲೆ ಕಾಣಿಸಿಕೊಂಡ ಗಾಯದ ಗುರುತಿನ ರಹಸ್ಯ ಅರಿವಾಗಿತ್ತು. ತಮಗೆ ವೈದ್ಯಕೀಯ ಲೋಕ ಮರು ಜೀವ ನೀಡಿದ್ದನ್ನು ಅರ್ಥ ಮಾಡಿಕೊಂಡ ಸಂಜಯ್, ತಾವು ಕೂಡಾ ವೈದ್ಯರಾಗುವ ಕನಸು ಕಂಡಿದ್ದರು.

ಅದರಂತೆ 2021ರಲ್ಲಿ ವೈದ್ಯಕೀಯ ವೃತ್ತಿ ಪೂರ್ಣ ಗೊಳಿಸಿದ ಸಂಜಯ್ ಶಕ್ತಿ ಮೊದಲಿಗೆ ಬೆಂಗಳೂರಿನಲ್ಲಿ ಜೀವನ ಆರಂಭಿಸಿ ಬಳಿಕ ಇದೀಗ ತಮಿಳುನಾಡಿನ ಕಾಂಚೀಪುರಂನಲ್ಲಿ ಮಕ್ಕಳ ತಜ್ಞರಾಗಿ ಸೇವೆ ನೀಡುತ್ತಿದ್ದಾರೆ. ದೇಶದ ಮೊದಲ ಯಕೃತ್ ಕಸಿ (liver transplant) ಚಿಕಿತ್ಸೆಗೆ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ.15ರಂದು ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಸಂಜಯ್ ಶಕ್ತಿ ಅವರನ್ನು ಸನ್ಮಾನಿಸಲಾಯಿತು.

- ಜಾಹೀರಾತು -

ಇತ್ತ ಶಸ್ತ್ರಚಿಕಿತ್ಸೆಯಿಂದ ಪ್ರೇರಣೆ ಪಡೆದ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆ, ಇಲ್ಲಿಯವರೆಗೆ 4,300 ಯಕೃತ್‌ ಕಸಿಯನ್ನು ಯಶಸ್ವಿಯಾಗಿ ಮಾಡಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಜಿಲ್ಲೆಮುಖಪುಟ

Loksabha Election Live update: ಚಾಮರಾಜನಗರ ಲೋಕಸಭಾ ಚುನಾವಣೆ; ಮತ ಚಲಾಯಿಸಿದ ಅಪ್ಪ-ಮಗ ಸುತ್ತೂರು ಶ್ರೀಗಳಿಂದ ಮತದಾನ

April 26, 2024
ಜಿಲ್ಲೆ

ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವೆಲ್ಲಾ ಸ್ಕೂಲ್? ಇಲ್ಲಿದೆ ಪಟ್ಟಿ

December 1, 2023
ಜಿಲ್ಲೆಮುಖಪುಟಮೈಸೂರು ನಗರ

ಕನ್ನಡಕ್ಕೆ ಅಪಮಾನ : ʼಥಗ್‌ ಲೈಫ್‌ ಬ್ಯಾನ್‌ʼ…! ನಟ ಕಮಲ್‌ ಹಾಸನ್‌ ಗೆ ಎಚ್ಚರಿಕೆ ನೀಡಿದ ಕನ್ನಡ ಪರ ಸಂಘಟನೆ!

June 2, 2025
ಜಿಲ್ಲೆ

ಕೈ ಇಲ್ಲದ ಪ್ಯಾರಾ ಆರ್ಚರ್ ಶೀತಲ್‌ ದೇವಿಗೆ ವಿಶ್ವ ನಂ.1 ಪಟ್ಟ

November 29, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?