PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಗೆ 30 ಲಕ್ಷ ವಂಚನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಗೆ 30 ಲಕ್ಷ ವಂಚನೆ
ಬೆಂಗಳೂರುಮುಖಪುಟ

ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಗೆ 30 ಲಕ್ಷ ವಂಚನೆ

Prathinidhi News
Last updated: May 13, 2024 4:31 pm
Prathinidhi News
Published May 13, 2024
Share
SHARE

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಗಾಗ ಆನ್‌ಲೈನ್ ವಂಚನೆ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಸೈಬರ್ ಖದೀಮರು ಕೂಡ ಜನರನ್ನು ವಂಚಿಸಲು ಹೊಸ ಹೊಸ ಮಾರ್ಗಗಳಲ್ಲಿ ಕಾಯುತ್ತಿರುತ್ತಾರೆ. ಇತ್ತೀಚೆಗೆ ಸ್ಕ್ರ್ಯಾಚ್ ಕಾರ್ಡ್‌ಗಳನ್ನು ಕಳುಹಿಸಿ ಲೂಟಿ ಮಾಡುತ್ತಿರುವ ಹಗರಣವೊಂದು ಬೆಳಕಿಗೆ ಬಂದಿತ್ತು. ಈಗ ಮತ್ತೊಂದೆಡೆ ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಗೆ 30 ಲಕ್ಷ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಫೆಡ್‌ಎಕ್ಸ್‌ ಮತ್ತು ಆದಾಯ ತೆರಿಗೆ ಇಲಾಖೆ ಹೆಸರಿನಲ್ಲಿ ಎಸಗುತ್ತಿರುವ ದುಷ್ಕೃತ್ಯಗಳ ಬಗ್ಗೆ ಜನರಿಗೆ ಅರಿವಾಗುತ್ತಿದ್ದಂತೆಯೇ ಸೈಬರ್ ವಂಚಕರು ಈಗ ದೂರಸಂಪರ್ಕ ಇಲಾಖೆಯ ಅಧಿಕಾರಿಗಳಂತೆ ಬಿಂಬಿಸಿ ಸಾರ್ವಜನಿಕರಿಂದ ಹಣ ಲಪಟಾಯಿಸುತ್ತಿದ್ದಾರೆ.

ನಾವು ದೂರಸಂಪರ್ಕ ಇಲಾಖೆ ಅಧಿಕಾರಿಗಳು. ನಿಮ್ಮ ಆಧಾರ್ ಬಯೋಮೆಟ್ರಿಕ್ ದುರ್ಬಳಕೆಯಾಗಿದೆ ಮತ್ತು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕಿದೆ ಎಂದು ಕಥೆ ಕಟ್ಟಿ ನಂಬಿಸಿ ಬೆಂಗಳೂರು ಮೂಲಕ ಮಹಿಳೆಯೊಬ್ಬರಿಗೆ ಸುಮಾರು 14 ದಿನಗಳ ಕಾಲ ಸಂಪರ್ಕ ಮಾಡಿ 30 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ.

ಮಹಿಳೆ ದಾಖಲಿಸಿದ ಎಫ್‌ಐಆರ್ ಪ್ರಕಾರ, ನಿದಾ (ಹೆಸರು ಬದಲಾಯಿಸಲಾಗಿದೆ) ಏಪ್ರಿಲ್ 8 ರಂದು 08146849478 ರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದ್ದಾರೆ. ವ್ಯಕ್ತಿಯು ತನ್ನನ್ನು ದೂರಸಂಪರ್ಕ ಅಧಿಸೂಚನೆ ಘಟಕದ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಅಪರಿಚಿತ ವ್ಯಕ್ತಿಗಳು ಮುಂಬೈನಲ್ಲಿ ಸಿಮ್ ಕಾರ್ಡ್‌ಗಳನ್ನು ಖರೀದಿಸಲು ನಿಮ್ಮ ಆಧಾರ್ ಬಯೋಮೆಟ್ರಿಕ್ ಅನ್ನು ಬಳಸಿದ್ದಾರೆ. ಆ ಸಿಮ್ ಕಾರ್ಡ್​ ಕಾನೂನುಬಾಹಿರ ಜಾಹೀರಾತುಗಳನ್ನು ಪ್ರಚಾರ ಮಾಡಲು ಮತ್ತು ಅಪರಾಧ ಚಟುವಟಿಕೆಗಳನ್ನು ನಡೆಸಲು ಬಳಸಲಾಗುತ್ತಿದೆ ಎಂದು ವಂಚಕರು ನಿದಾಗೆ ತಿಳಿಸಿದ್ದಾರೆ.

- ಜಾಹೀರಾತು -

ಇದರಿಂದ ಗಾಬರಿಗೊಂಡ ನಿದಾ ವ್ಯಕ್ತಿಯ ಮಾತನ್ನು ನಂಬಿ ಅವರು ಹೇಳಿದಂತೆ ಮಾಡಿದ್ದಾರೆ. ವಂಚಕ ವ್ಯಕ್ತಿ ನಿದಾ ಅವರಿಗೆ ಬೇರೊಂದು ನಂಬರ್ ಕೊಟ್ಟ ಸಂಪರ್ಕ ಮಾಡಲು ತಿಳಿಸಿದ್ದಾನೆ. ಅದರಂತೆ ನಿದಾ ಕರೆ ಮಾಡಿದ್ದು, ಆತ ತಾನು ಮುಂಬೈನ ಅಂಧೇರಿ ಪೊಲೀಸ್ ಠಾಣೆಯ ಅಧಿಕಾರಿ ಎಂದು ಹೇಳಿಕೊಂಡಿದ್ದಾನೆ.

ನಂತರ ವಂಚಕರು ನಿದಾ ಅವರ ಫೋನ್‌ಗೆ 9686071308 ಮತ್ತು 8735028302 ರಿಂದ ವೀಡಿಯೊ ಕರೆಗಳನ್ನು ಮಾಡಿದ್ದಾರೆ. ಆಕೆಯ ಹೆಸರನ್ನು ಬಳಸಿಕೊಂಡು ಖರೀದಿಸಿದ ಸಿಮ್‌ಗಳನ್ನು ಅಕ್ರಮ ಜಾಹೀರಾತುಗಳಿಗೆ ಮತ್ತು ಬಹು ಬ್ಯಾಂಕ್ ಖಾತೆಗಳನ್ನು ತೆರೆಯಲು ಬಳಸಲಾಗಿದೆ ಎಂದು ಹೇಳಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಇಂತಹ ಖಾತೆಗಳನ್ನು ನಿರ್ವಹಿಸಲಾಗುತ್ತದೆ ಎಂದು ಹೇಳಿ ಭಯ ಹುಟ್ಟಿಸಿ ತಮ್ಮನ್ನು ನಂಬುವಂತೆ ಮಾಡಿದ್ದಾರೆ.

ಇನ್ನು ತಾನೊಬ್ಬ ಪೊಲೀಸ್ ಎಂದು ಹೇಳಿಕೊಂಡ ವಂಚಕ, ತನಿಖೆಯ ಬಗ್ಗೆ ಬೇರೆ ಯಾರಿಗಾದರೂ ತಿಳಿದರೆ ನಿಮ್ಮ ಕುಟುಂಬದವರನ್ನು ಸೈಬರ್ ವಂಚಕರು ಟಾರ್ಗೆಟ್ ಮಾಡುತ್ತಾರೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ. ನಿದಾ ಅವರು ಇದನ್ನು ನಂಬುತ್ತಿದ್ದಂತೆ, ವಂಚಕರು ತನಿಖೆಯ ಭಾಗವಾಗಿ ಆಕೆಯ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ. ನಿದಾ ಅವರಿಗೆ ಮೊದಲು ಸ್ವಲ್ಪ ಹಣವನ್ನು ಕಳುಹಿಸುವಂತೆ ಹೇಳಿ ಹಣ ವರ್ಗಾಹಿಸಿಕೊಂಡಿದ್ದಾರೆ. ನಂತರ, ಆಕೆಯ ಬ್ಯಾಂಕ್ ಖಾತೆಗಳು ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ಹೆಚ್ಚಿನ ವಹಿವಾಟುಗಳನ್ನು ಮಾಡುವಂತೆ ಕೇಳಿದ್ದಾರೆ.

ನಿದಾ ಅವರು ಏಪ್ರಿಲ್ 8 ರಿಂದ 21 ರ ನಡುವೆ ಹಲವಾರು ವಹಿವಾಟುಗಳನ್ನು ನಡೆಸಿ ಒಟ್ಟು 30 ಲಕ್ಷ ರೂ.ಗಳನ್ನು ಕಳುಹಿಸಿದ್ದಾರೆ. ಅಂತಿಮವಾಗಿ 14 ದಿನಗಳ ಬಳಿಕ ನಿದಾ ಅವರಿಗೆ ವಂಚನೆಯಾಗಿರುವುದು ತಿಳಿದಿದ್ದು ಮೇ 6 ರಂದು ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ.

ಐಟಿ ಕಾಯಿದೆ ಮತ್ತು ಐಪಿಸಿ ಸೆಕ್ಷನ್ 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಯನ್ನು ಪ್ರೇರೇಪಿಸುವುದು) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ಅನ್ನು ದಾಖಲಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟಮೈಸೂರು ಗ್ರಾಮಾಂತರ

ನಂಜನಗೂಡು : ಹಾಲಿಗೆ ನೀರು & ಪೌಡರ್ ಮಿಕ್ಸ್..! ಉತ್ಪಾದಕ ಸಂಘದ ಸದಸ್ಯರಿಂದಲೇ ಅಕ್ರಮ..

July 31, 2025
ಮುಖಪುಟ

ಜನಪರ ಪತ್ರಿಕೋದ್ಯಮ ನಮ್ಮ ಆದ್ಯತೆ ಆಗಬೇಕು: ಪತ್ರಕರ್ತ ಪಿ.ಸಾಯಿನಾಥ್

April 3, 2024
ಬೆಂಗಳೂರುಮುಖಪುಟಸಿನಿಮಾ

ಆನ್ಲೈನ್‌ ಬೆಟ್ಟಿಂಗ್‌ ಜೂಜಾಟದ ಜಾಹೀರಾತು ಸಂಬಂಧ ಕ್ಲಾರಿಟಿ ನೀಡಿದ ನಟ ಪ್ರಕಾಶ್‌ ರಾಜ್‌

March 21, 2025
ಚುನಾವಣೆಮುಖಪುಟ

ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಕಾಲಭೈರವೇಶ್ವರ ದೇವರ ದರ್ಶನ ಪಡೆದ ಹೆಚ್‌ಡಿಕೆ

March 31, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?