PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಉತ್ತರಾಖಂಡ ಸುರಂಗ ಕುಸಿದು 7 ದಿನ, ಇನ್ನೂ ಹೊರಬರದ 41 ಕಾರ್ಮಿಕರು!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಉತ್ತರಾಖಂಡ ಸುರಂಗ ಕುಸಿದು 7 ದಿನ, ಇನ್ನೂ ಹೊರಬರದ 41 ಕಾರ್ಮಿಕರು!
ಸಮಗ್ರ

ಉತ್ತರಾಖಂಡ ಸುರಂಗ ಕುಸಿದು 7 ದಿನ, ಇನ್ನೂ ಹೊರಬರದ 41 ಕಾರ್ಮಿಕರು!

Prathinidhi News
Last updated: November 19, 2023 9:50 am
Prathinidhi News
Published November 19, 2023
Share
SHARE

ಉತ್ತರಕಾಶಿ: ಉತ್ತರಾಖಂಡದ ಸಿಲ್‌ಕ್ಯಾರಾ ಸುರಂಗದಲ್ಲಿ ಭೂಕುಸಿತ ಸಂಭವಿಸಿ 150 ತಾಸು ಕಳೆದರೂ ಒಳಗೆ ಸಿಕ್ಕಿಬಿದ್ದ41 ಕಾರ್ಮಿಕರ ರಕ್ಷಣೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಇಡೀ ಕಾರ್ಯಾಚರಣೆಯನ್ನೇ ಹೊಸ ದಿಕ್ಕಿನಲ್ಲಿ ನಡೆಸಲು ಯೋಜಿಸಲಾಗಿದೆ. ಇದುವರೆಗೂ ಸುರಂಗದ ಮುಖಭಾಗದಿಂದ ಮಣ್ಣು ಹೊರತೆಗೆದು, ಅದರೊಳಗೆ ದೊಡ್ಡ ಸ್ಟೀಲ್‌ ಪೈಪ್‌ ತೂರಿಸಿ ಕಾರ್ಮಿಕರ ರಕ್ಷಣೆಗೆ ನಿರ್ಧರಿಸಲಾಗಿತ್ತು. ಆದರೆ ಅದರ ಬದಲು ಸುರಂಗಕ್ಕೆ ಮೇಲ್ಬಾಗದಿಂದ ರಂಧ್ರ ಕೊರೆಯಲು ಯೋಜಿಸಲಾಗಿದೆ.

ಪ್ಲಾನ್ ಬದಲು: ಸಿಲ್‌ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರ ರಕ್ಷಣೆ 7ನೇ ದಿನವಾದ ಶನಿವಾರವೂ ಸಾಧ್ಯವಾಗಿಲ್ಲ. ಕಾರ್ಯಾಚರಣೆ ಸ್ಥಳದಲ್ಲಿ ಪದೇ ಪದೇ ಮಣ್ಣು ಕುಸಿಯುತ್ತಿರುವುದು, ಯಂತ್ರಗಳು ಕೈಕೊಡುತ್ತಿರುವುದು ಸಿಬ್ಬಂದಿಯನ್ನು ಕಂಗೆಡಿಸಿದೆ. ಜೊತೆಗೆ ಕಾರ್ಯಾಚರಣೆ ಮುಂದುವರೆಸಿದರೆ ಮತ್ತಷ್ಟು ಮಣ್ಣು ಕುಸಿತದ ಆತಂಕ ಎದುರಾಗಿದೆ.

ಹೀಗಾಗಿ ಸುರಂಗದ ಮೇಲ್ಬಾಗದಿಂದ ರಂಧ್ರ ಕೊರೆದು ಕಾರ್ಮಿಕರನ್ನು ರಕ್ಷಿಸುವ ಯೋಜನೆ ರೂಪಿಸಲಾಗಿದೆ. ‘ನಾವು ಲಂಬವಾದ ರಂಧ್ರ ಕೊರೆಯುವ ಮೂಲಕ ಕಾರ್ಮಿಕರ ರಕ್ಷಿಸುವ ಯೋಜನೆ ರೂಪಿಸುತ್ತಿದ್ದೇವೆ. ಇದಕ್ಕಾಗಿ ಸುರಂಗದ ಮೇಲ್ಬಾಗದ ಸುಮಾರು 1 ಸಾವಿರ ಮೀ. ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗಿದೆ. ಶೀಘ್ರವೇ ರಂಧ್ರ ಕೊರೆಯುವ ಕೆಲಸ ಆರಂಭವಾಗಲಿದೆ. ಇದಕ್ಕೆ ಎಷ್ಟು ಸಮಯ ಹಿಡಿಯುತ್ತದೆ ಎಂಬ ಮಾಹಿತಿ ಭಾನುವಾರ ಮಧ್ಯಾಹ್ನದ ವೇಳೆಗೆ ಲಭ್ಯವಾಗಲಿದೆ ಎಂದು ಗಡಿ ರಸ್ತೆ ಪ್ರಾಧಿಕಾರದ ಮುಖ್ಯಸ್ಥ ಮೇಜರ್ ನಮನ್ ನರೂಲಾ ಹೇಳಿದ್ದಾರೆ.

ಇದಕ್ಕಾಗಿ ಇಂದೋರ್‌ನಿಂದ ಶಕ್ತಿಶಾಲಿಯಾದ ಸುರಂಗ ಕೊರೆಯುವ ಯಂತ್ರವನ್ನು ತರಿಸಿಕೊಳ್ಳಲಾಗಿದ್ದು, ಈ ಯಂತ್ರದ ಮೂಲಕ ರಂಧ್ರ ಕೊರೆಯುವ ಕಾರ್ಯ ನಡೆಸಲಾಗುತ್ತದೆ. ಈಗಾಗಲೇ ಭೂ ಕುಸಿತ ಸಂಭವಿಸಿರುವ ಭಾಗಕ್ಕಿಂತ ಮುಂದೆ ರಂಧ್ರ ಕೊರೆದು ಕಾರ್ಮಿಕರನ್ನು ರಕ್ಷಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಇಂದಿನಿಂದ ಮಾವು, ಹಲಸು ಮೇಳ

May 8, 2024
ಸಮಗ್ರ

ಬೇಡಿಕೆಗಳ ಈಡೇರಿಗೆ ಒತ್ತಾಯಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

July 12, 2024
ಸಮಗ್ರ

ವಿಜಯ್ ದಿವಸ: ಸಚಿವ ಆರ್‌ಸಿಯಿಂದ ಇಂದುಹುತಾತ್ಮ ಯೋಧರಿಗೆ ಗೌರವ

December 16, 2023
ಸಮಗ್ರ

ಹಗರಣದಲ್ಲಿ ದೊಡ್ಡ ತಿಮಿಂಗಿಲಗಳು ಭಾಗಿ

July 12, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?