PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜನವರಿ 15 ರಿಂದ ಜಾತ್ರಾ ಮಹೋತ್ಸವದ ಸಂಭ್ರಮ: ಅದ್ದೂರಿಯಿಂದ ಸಾಗಿದ ಸಿದ್ಧತೆಗಳು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜನವರಿ 15 ರಿಂದ ಜಾತ್ರಾ ಮಹೋತ್ಸವದ ಸಂಭ್ರಮ: ಅದ್ದೂರಿಯಿಂದ ಸಾಗಿದ ಸಿದ್ಧತೆಗಳು
ಮುಖಪುಟಮೈಸೂರು ನಗರಸನ್ನಿಧಾನ

ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜನವರಿ 15 ರಿಂದ ಜಾತ್ರಾ ಮಹೋತ್ಸವದ ಸಂಭ್ರಮ: ಅದ್ದೂರಿಯಿಂದ ಸಾಗಿದ ಸಿದ್ಧತೆಗಳು

Prathinidhi News
Last updated: January 12, 2026 3:38 pm
Prathinidhi News
Published January 12, 2026
Share
SHARE

ಮೈಸೂರು, ಜನವರಿ 12, 2026 : ಸುತ್ತೂರು ಶ್ರೀ ಕ್ಷೇತ್ರದ ಈ ಬಾರಿಯ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮದಿಂದ ಜರುಗಲು ಸಿದ್ಧವಾಗಿದೆ. ಸಾವಿರ ವರ್ಷಗಳ ಭವ್ಯ ಇತಿಹಾಸವಿರುವ ಈ ಪುಣ್ಯಕ್ಷೇತ್ರದಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸ್ಮರಣಾರ್ಥವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ 15 ರಿಂದ 20 ರವರೆಗೆ ಒಟ್ಟು ಆರು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಪ್ರಸಕ್ತ ಮಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಈ ಸಕಲ ಕಾರ್ಯಕ್ರಮಗಳು ನೆರವೇರಲಿವೆ. ಜಾತ್ರೆಯ ಪ್ರಮುಖ ಧಾರ್ಮಿಕ ವಿಧಿವಿಧಾನಗಳಾಗಿ ಜನವರಿ 16 ರಂದು ಸಾವಿರಾರು ಜೋಡಿಗಳ ಸಾಮೂಹಿಕ ವಿವಾಹ ಮತ್ತು ಹಾಲರವಿ ಉತ್ಸವ ನಡೆಯಲಿದೆ. ಜನವರಿ 17 ರಂದು ಭಕ್ತಸಾಗರದ ನಡುವೆ ಅದ್ಧೂರಿ ರಥೋತ್ಸವ ಹಾಗೂ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವ ಜರುಗಲಿದ್ದು, 18 ರಂದು ಮಹದೇಶ್ವರ ಕೊಂಡೋತ್ಸವ ಹಾಗೂ ಕಣ್ಮನ ಸೆಳೆಯುವ ಲಕ್ಷ ದೀಪೋತ್ಸವ ಏರ್ಪಾಡಾಗಿದೆ. 19 ರಂದು ಕಪಿಲಾ ನದಿಯ ಶಾಂತ ಲಹರಿಯಲ್ಲಿ ತೆಪ್ಪೋತ್ಸವ ಹಾಗೂ ಕೊನೆಯ ದಿನವಾದ 20 ರಂದು ಅನ್ನ ಬ್ರಹ್ಮೋತ್ಸವದೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಧಾರ್ಮಿಕ ವಿಧಿಗಳ ಜೊತೆಗೆ ಜನಪದ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ರಂಗೋಲಿ, ಸೋಬಾನೆ ಪದ, ರಾಗಿ ಬೀಸುವ ಸ್ಪರ್ಧೆ, ಭಜನಾ ಮೇಳ, ಕುಸ್ತಿ ಪಂದ್ಯಾವಳಿ ಹಾಗೂ ಗಾಳಿಪಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಕೃಷಿ ಕ್ಷೇತ್ರದಲ್ಲಿ ಆಸಕ್ತಿಯುಳ್ಳವರಿಗಾಗಿ ಬೃಹತ್ ವಸ್ತು ಪ್ರದರ್ಶನ, 55ನೇ ದನಗಳ ಪರಿಶೆ ಮತ್ತು ಕೃಷಿ ವಿಚಾರ ಸಂಕಿರಣಗಳು ನಡೆಯಲಿವೆ. ಸಾಂಸ್ಕೃತಿಕ ಲೋಕದ ಭಾಗವಾಗಿ ಕಲಾವೈಭವ, ಕಲಾತಂಡಗಳ ಪ್ರದರ್ಶನ ಹಾಗೂ ಮನರಂಜನೆಗಾಗಿ ದೋಣಿವಿಹಾರ ಮತ್ತು ಮಲ್ಲಕಂಬ ಪ್ರದರ್ಶನಗಳು ಪ್ರಮುಖ ಆಕರ್ಷಣೆಗಳಾಗಿವೆ.

ಲಕ್ಷಾಂತರ ಭಕ್ತರ ಹಸಿವು ನೀಗಿಸಲು ಮಠವು ಬೃಹತ್ ದಾಸೋಹ ವ್ಯವಸ್ಥೆಯನ್ನು ಮಾಡಿಕೊಂಡಿದ್ದು, 150ಕ್ಕೂ ಹೆಚ್ಚು ನುರಿತ ಅಡುಗೆ ಭಟ್ಟರು ಅಹೋರಾತ್ರಿ ಕಾರ್ಯನಿರ್ವಹಿಸಲಿದ್ದಾರೆ. ಇದಕ್ಕಾಗಿ ಸಾವಿರ ಕ್ವಿಂಟಾಲ್ ಅಕ್ಕಿ, ನೂರಾರು ಕ್ವಿಂಟಾಲ್ ಬೇಳೆ, ಸಕ್ಕರೆ, ಬೆಲ್ಲ ಹಾಗೂ ಸಾವಿರಾರು ಲೀಟರ್ ಹಾಲು-ಮೊಸರನ್ನು ಸಂಗ್ರಹಿಸಲಾಗಿದೆ. ಪ್ರಸಾದ ವಿತರಣೆಯು ದಿನದ 24 ಗಂಟೆಯೂ ಸುಗಮವಾಗಿ ನಡೆಯಲು ಬ್ಯಾರೀಕೆಡ್ ವ್ಯವಸ್ಥೆ ಮಾಡಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸರ್ವ ಸಿದ್ಧತೆಗಳನ್ನು ಪೂರೈಸಲಾಗಿದೆ ಎಂದು ಜಾತ್ರಾ ಸಮಿತಿಯ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

- ಜಾಹೀರಾತು -

ಸುದ್ದಿಗೋಷ್ಟಿಯಲ್ಲಿ ಸಮಿತಿಯ ಪ್ರಮುಖರಾದ ಮಂಜುನಾಥ್, ಸುಬ್ಬಪ್ಪ, ಶಿವಕುಮಾರ್, ಉದಯಶಂಕರ್ ಹಾಜರಿದ್ದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು : ಡಿಸೆಂಬರ್ 6 ರಂದು ಕ್ರೆಡಾಯ್ ಮೈಸೂರು ಘಟಕ ವತಿಯಿಂದ ರೇರಾ ಜಾಗೃತಿ ಕಾರ್ಯಾಗಾರ ಆಯೋಜನೆ

December 4, 2025
ಮುಖಪುಟಮೈಸೂರು ನಗರರಾಜಕೀಯ

ನಾನು ಜೆಡಿಎಸ್ ಬಿಡಲ್ಲ ಹಾಗೂ ಕಾಂಗ್ರೆಸ್ ಗೆ ಹೋಗಲ್ಲ ; ಶಾಸಕ ಜಿ ಟಿ ದೇವೆಗೌಡ ಸ್ಪಷ್ಟನೆ

November 25, 2025
ಮುಖಪುಟಮೈಸೂರು ನಗರ

ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ: ಆನೆಗಳ ರಕ್ಷಣೆಗೆ ಎಐ ತಂತ್ರಜ್ಞಾನದ ಮೊರೆ ಹೋದ ಅರಣ್ಯ ಇಲಾಖೆ

December 23, 2025
ನಂಜನಗೂಡುಮುಖಪುಟಮೈಸೂರು ಗ್ರಾಮಾಂತರರಾಜಕೀಯ

ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ; ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ !

November 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?