ಮೈಸೂರು, ನವೆಂಬರ್ 8, 2025 : ಮೈಸೂರಿನ ಪ್ರತಿಷ್ಠಿತ ಜಿ.ಎಸ್.ಎಸ್ ಸಮೂಹ ಸಂಸ್ಥೆ ವತಿಯಿಂದ ನಗರದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಶಿಬಿರದಲ್ಲಿ ನೂರಾರು ಮಂದಿ ಪಾಲ್ಗೊಂಡು ತಪಾಸಣೆ ಮಾಡಿಸಿಕೊಂಡರು.
ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ಕೆಂಪೀರೇಗೌಡ ಎಜುಕೇಷನ್ ಅಂಡ್ ಕಲ್ಚರಲ್ ಟ್ರಸ್ಟ್ ಆವರಣದಲ್ಲಿ ಈ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ಶಿಬಿರದಲ್ಲಿ ಸಾರ್ವಜನಿಕರು ಬಿ.ಪಿ. (ರಕ್ತದೊತ್ತಡ), ಶುಗರ್ (ಮಧುಮೇಹ), ಕಣ್ಣಿನ ಸಮಸ್ಯೆಗಳು ಸೇರಿದಂತೆ ಇನ್ನಿತರ ಆರೋಗ್ಯ ಸಂಬಂಧಿ ತಪಾಸಣೆಗಳನ್ನು ಮಾಡಿಸಿಕೊಂಡರು. ತಪಾಸಣೆಗೊಳಗಾದ ಜನರಿಗೆ ತಜ್ಞ ವೈದ್ಯರ ತಂಡವು ಅಗತ್ಯ ಸಲಹೆ ಮತ್ತು ಮಾರ್ಗದರ್ಶನಗಳನ್ನು ನೀಡಿತು.
ಈ ಕುರಿತು ಮಾಹಿತಿ ನೀಡಿದ ಜಿ.ಎಸ್.ಎಸ್ ಸಮೂಹ ಸಂಸ್ಥೆಯ ಪ್ರಮುಖರಾದ ಗೀತಾ ಶ್ರೀಹರಿ ಮತ್ತು ಕ್ಲಿಯರ್ ಮೆಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಜಗದೀಶ್ ಅವರು, ಸಾರ್ವಜನಿಕರ ಆರೋಗ್ಯ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಈ ಶಿಬಿರವನ್ನು ಏರ್ಪಡಿಸಲಾಗಿತ್ತು. ಇಂತಹ ಆರೋಗ್ಯ ಸೇವಾ ಕಾರ್ಯಕ್ರಮಗಳನ್ನು ಭವಿಷ್ಯದಲ್ಲೂ ಮುಂದುವರೆಸುವ ಉದ್ದೇಶವಿದೆ ಎಂದು ತಿಳಿಸಿದರು.
