ಬೆಂಗಳೂರು , ನವೆಂಬರ್ 15, 2025 : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (Salumarada Thimmakka ) ಅಂತ್ಯ ಸಂಸ್ಕಾರ (Last rights) ಇವತ್ತು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
ಇವತ್ತು ಶನಿವಾರ ಮಧ್ಯಾಹ್ನ 2 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಸಿದ್ಧತೆ ನಡೆಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 10.30ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಂತರ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಸಾವಿರಾರು ಮರಗಳನ್ನೇ ಮಕ್ಕಳಂತೆ ಸಾಕಿ ಸಲಹುವ ಮೂಲಕ ಲಕ್ಷಾಂತರ ಜನರಿಗೆ ಪ್ರೇರಣೆಯಾಗುವ ಮೂಲಕ ಕರ್ನಾಟಕ ರಾಜ್ಯದ ಪರಿಸರ ರಾಯಭಾರಿಯಾಗಿದ್ದರು. ತಿಮ್ಮಕ್ಕ ನಿಧನಕ್ಕೆ ದೇಶದೆಲ್ಲೆಡೆ ತೀವ್ರ ಸಂತಾಪ ವ್ಯಕ್ತವಾಗಿದೆ.
