ಮೈಸೂರು, ನವೆಂಬರ್ 24, 2025 : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸೋ ವರುಣ ಕ್ಷೇತ್ರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಶಾಲೆ ವಿದ್ಯಾರ್ಥಿಗಳ ಕೈಯಲ್ಲಿ ಸಂಪ್ ಕ್ಲೀನ್ ಮಾಡಿಸಲಾಗಿದೆ.
ವರುಣಾದ ಬಿಳಿಗೆರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಬಳಿ ಸಂಪ್ ನಿಂದ ನೀರು ಎತ್ತಿಸಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಈ ಸಂಬಂಧ ಫೋಟೋ ಹಾಗೂ ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ.
ಕೆಲ ದಿನಗಳ ಹಿಂದೆ ನಡೆದ ಈ ಘಟನೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.ಗ್ರಾಮಸ್ಥ ಸಿದ್ದರಾಜು ಎಂಬುವವರು ಮಗಳನ್ನು ಅಂಗನವಾಡಿಗೆ ಬಿಡಲು ಹೋಗಿದ್ದಾಗ ಶಾಲೆಯ ವಿದ್ಯಾರ್ಥಿಗಳು ಸಂಪ್ ನಿಂದ ನೀರು ಎತ್ತಿ ಶೌಚಾಲಯ ಶುಚಿಗೊಳಿಸುತ್ತಿದ್ದರು. ಈ ವೇಳೆ ಅವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದರು.
ಶಿಕ್ಷಕರು ವಿದ್ಯಾರ್ಥಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ಬಿಇಒಗೆ ದೂರು ನೀಡಿದ್ದಾರೆ. ಬಿಇಒ ನಿರ್ದೇಶನದ ಮೇರೆಗೆ ಲಿಖಿತ ದೂರು ನೀಡಿದ್ದಾಗಿ ಸಿದ್ದರಾಜು ತಿಳಿಸಿದ್ದಾರೆ. ಮಕ್ಕಳಿಂದ ಸoಪ್ ನಿಂದ ನೀರು ಎತ್ತಿಸಬಾರದು. ಈ ಬಗ್ಗೆ ಶಿಕ್ಷಕರ ವಿರುದ್ಧ ಡಿಡಿಪಿಐ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸದ್ಯ ಇದೇ ವಿಚಾರ ಎಲ್ಲೆಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.
