ಮೈಸೂರು, ಡಿಸೆಂಬರ್ 22, 2025 : ಸರಗೂರು ತಾಲ್ಲೂಕು ಕಚೇರಿಗೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಸ್ಥಳೀಯವಾಗಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ.
ತಮಿಳು ನಟ ಅಜಿತ್ ಕುಮಾರ್ ಅವರ ಚೆನ್ನೈ ನಿವಾಸ ಹಾಗೂ ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್.ಡಿ.ಎಕ್ಸ್ (RDX) ಬಾಂಬ್ ಇರಿಸಲಾಗಿದ್ದು, ಮಧ್ಯಾಹ್ನ 1 ಗಂಟೆಗೆ ಸ್ಫೋಟಗೊಳ್ಳಲಿದೆ ಎಂಬ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿದೆ.
ಇ-ಮೇಲ್ ಮೂಲಕ ಬೆದರಿಕೆ: ಅಪರಿಚಿತ ವ್ಯಕ್ತಿಯೊಬ್ಬ ಕಳುಹಿಸಿರುವ ಈ ಮೇಲ್ನಲ್ಲಿ ಮಧ್ಯಾಹ್ನದ ವೇಳೆಗೆ ಸ್ಫೋಟ ಸಂಭವಿಸಲಿದೆ ಎಂದು ಎಚ್ಚರಿಸಲಾಗಿದೆ. ಇದರಿಂದಾಗಿ ಕಚೇರಿಯಲ್ಲಿದ್ದ ಅಧಿಕಾರಿಗಳು ಮತ್ತು ಕೆಲಸದ ನಿಮಿತ್ತ ಬಂದಿದ್ದ ಸಾರ್ವಜನಿಕರು ಭಯಭೀತರಾಗಿ ಹೊರಬಂದರು.: ಮಾಹಿತಿ ತಿಳಿಯುತ್ತಿದ್ದಂತೆಯೇ ಸರಗೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಇಡೀ ಕಚೇರಿ ಸಂಕೀರ್ಣವನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಬೆದರಿಕೆ ಕರೆ ಸುಳ್ಳೇ ಅಥವಾ ಗಂಭೀರವಾದುದೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸೈಬರ್ ಕ್ರೈಂ ಪೊಲೀಸರ ನೆರವಿನೊಂದಿಗೆ ಇ-ಮೇಲ್ ಮೂಲವನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.
ಪೊಲೀಸರು ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಸಾರ್ವಜನಿಕರು ಆತಂಕಪಡದಂತೆ ಮನವಿ ಮಾಡಿದ್ದಾರೆ.
