ಬೆಂಗಳೂರು, ಜನವರಿ 13, 2026 : ಕರುನಾಡಲ್ಲಿ ವಿಪರೀತ ಚಳಿ ಆವರಿಸಿದ್ದು, ರಾಜ್ಯದ ಹಲವೆಡೆ ಅಲ್ಲಲ್ಲಿ ತುಂತುರು ಮಳೆಯಾಗ್ತಿದೆ. ಸೈಕ್ಲೋನ್ ನಿಂದ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಳೆದ 2 ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಚಳಿ ಕೊಂಚ ಕಡಿಮೆಯಾಗಿದ್ದು, ಅಲ್ಲಲ್ಲಿ ತುಂತುರು ಮಳೆ ಸುರಿಯುತ್ತಿದೆ. ಜನವರಿ 15ರವರೆಗೂ ಇದೇ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.
ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಹಾಗೂ ಕೇರಳ, ತಮಿಳುನಾಡು, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಣಹವೆ ಇರಲಿದೆ. ಜನವರಿ 26ರವರೆಗೂ ಇದೇ ರೀತಿಯಲ್ಲಿ ಥಂಡಿ ವಾತಾವರಣ ಇರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
