ಬೆಂಗಳೂರು, ಫೆಬ್ರವರಿ 5, 2026: ರಾಜ್ಯ ಬಜೆಟ್ ಸಿದ್ಧತೆಗೆ ಅಧಿಕೃತವಾಗಿ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಕ್ತಿ ಭವನದಲ್ಲಿ ಇಂದು 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದರು. ಸರಣಿ ಸಭೆಗಳ ಮೊದಲ ಭಾಗವಾಗಿ ಮುಖ್ಯಮಂತ್ರಿಗಳು ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು.

ಈ ಮಹತ್ವದ ಸಭೆಯಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಯ ಆದ್ಯತೆಗಳು ಮತ್ತು ಮುಂಬರುವ ಯೋಜನೆಗಳ ಬಗ್ಗೆ ವಿವರಣೆ ನೀಡಿದರು. ಸಭೆಯಲ್ಲಿ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಆರ್ಥಿಕ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡು ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮತ್ತು ಯೋಜನೆಗಳ ಅನುಷ್ಠಾನದ ಬಗ್ಗೆ ಸಮಾಲೋಚನೆ ನಡೆಸಿದರು.
