PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಯತೀಂದ್ರ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ: ಫ್ಲೆಕ್ಸ್ ಹಾವಳಿ ಹಾಗೂ ಬಾಗಲಕೋಟೆ ಕಲ್ಲು ತೂರಾಟದ ವಿರುದ್ಧ ಮೈಸೂರಿನಲ್ಲಿ ಆಕ್ರೋಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಯತೀಂದ್ರ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ: ಫ್ಲೆಕ್ಸ್ ಹಾವಳಿ ಹಾಗೂ ಬಾಗಲಕೋಟೆ ಕಲ್ಲು ತೂರಾಟದ ವಿರುದ್ಧ ಮೈಸೂರಿನಲ್ಲಿ ಆಕ್ರೋಶ
ಮುಖಪುಟಮೈಸೂರು ನಗರ

ಯತೀಂದ್ರ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ: ಫ್ಲೆಕ್ಸ್ ಹಾವಳಿ ಹಾಗೂ ಬಾಗಲಕೋಟೆ ಕಲ್ಲು ತೂರಾಟದ ವಿರುದ್ಧ ಮೈಸೂರಿನಲ್ಲಿ ಆಕ್ರೋಶ

Prathinidhi News
Last updated: February 21, 2026 3:49 pm
Prathinidhi News
Published February 21, 2026
Share
SHARE

ಮೈಸೂರು, ಫೆಬ್ರವರಿ 21, 2026 : “ಮಾಡಲು ಕೆಲಸವಿಲ್ಲದವರ ಆರೋಪಕ್ಕೆ ಉತ್ತರಿಸುವುದಿಲ್ಲ” ಎಂಬ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವರ್ಗಾವಣೆ ದಂಧೆ ಮಾಡುವುದು ಮತ್ತು ಅಪ್ಪನ ಅಧಿಕಾರ ದುರುಪಯೋಗಪಡಿಸಿಕೊಂಡು ಮ್ಯಾಟ್ರಿಕ್ಸ್ ಲ್ಯಾಬ್ ಹೆಸರಲ್ಲಿ ಹಣ ಮಾಡುವುದು ಕೆಲಸವೇ ಎಂದು ಪ್ರಶ್ನಿಸಿದರು. ಅಪ್ಪನ ಹೆಸರಿಲ್ಲದಿದ್ದರೆ ನಿಮ್ಮನ್ನು ಯಾರೂ ಕ್ಯಾರೇ ಎನ್ನುತ್ತಿರಲಿಲ್ಲ ಎಂದು ಲೇವಡಿ ಮಾಡಿದ ಅವರು, ನಿಮ್ಮ ಅಪ್ಪ ಬೆಂಗಳೂರಿನಿಂದ ಮೈಸೂರಿಗೆ ಆರಾಮವಾಗಿ ಓಡಾಡಲು ರಸ್ತೆ ಮಾಡಿಸಿದ್ದು ಇದೇ ಪ್ರತಾಪ್ ಸಿಂಹ ಎಂಬುದು ನೆನಪಿರಲಿ ಎಂದು ನೆನಪಿಸಿದರು. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮೈಸೂರಿನಿಂದಲೇ ಗೆದ್ದು ಬರುವುದಾಗಿ ಸವಾಲು ಹಾಕಿದ ಅವರು, ತಾಕತ್ತಿದ್ದರೆ ಸಿದ್ದರಾಮಯ್ಯ ಅವರು ಮೈಸೂರು ನಗರದಲ್ಲಿ ಸ್ಪರ್ಧಿಸಲಿ ಎಂದು ಅಬ್ಬರಿಸಿದರು.

ಫ್ಲೆಕ್ಸ್ ಹಾವಳಿ ವಿರುದ್ಧ ಪಾಲಿಕೆಗೆ ಮನವಿ: ಇದೇ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ಮಿತಿಮೀರಿರುವ ಫ್ಲೆಕ್ಸ್ ಹಾವಳಿ ಮತ್ತು ಅವೈಜ್ಞಾನಿಕ ಜಾಹಿರಾತು ಫಲಕಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಾಪ್ ಸಿಂಹ ಅವರು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಲಾಗಿರುವ ಬೃಹತ್ ಫ್ಲೆಕ್ಸ್‌ಗಳು ವಾಹನ ಸವಾರರ ಗಮನ ಬೇರೆಡೆಗೆ ಸೆಳೆಯುತ್ತಿದ್ದು, ಅಪಘಾತಗಳಿಗೆ ಕಾರಣವಾಗುತ್ತಿವೆ. ಮಾರ್ಗಸೂಚಿ ಫಲಕಗಳ ಮೇಲೆಯೂ ವಾಣಿಜ್ಯ ಜಾಹಿರಾತುಗಳನ್ನು ಹಾಕಿರುವುದು ಸರಿಯಲ್ಲ, ಕೂಡಲೇ ಇವುಗಳನ್ನು ತೆರವುಗೊಳಿಸಬೇಕೆಂದು ಅವರು ಒತ್ತಾಯಿಸಿದರು.

ತ್ಯಾಜ್ಯ ವಿಲೇವಾರಿ ಯಶಸ್ಸು ಮೋದಿ ಸರ್ಕಾರಕ್ಕೆ: ಮೈಸೂರಿನಲ್ಲಿ ಹತ್ತಾರು ವರ್ಷಗಳಿಂದ ಬೆಟ್ಟದಂತೆ ಸಂಗ್ರಹವಾಗಿದ್ದ ಸಾವಿರಾರು ಟನ್ ಕಸದ ವಿಲೇವಾರಿ ಕಾರ್ಯ ಅಂತಿಮ ಹಂತಕ್ಕೆ ಬಂದಿರುವ ಕುರಿತು ಪ್ರತಾಪ್ ಸಿಂಹ ಹರ್ಷ ವ್ಯಕ್ತಪಡಿಸಿದರು. ನಾನು ಸಂಸದನಾಗಿದ್ದ ಅವಧಿಯಲ್ಲಿ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಮಾಡಿಸಿದ್ದರಿಂದಲೇ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಯಾಗಿದ್ದು, ಈ ಮೂಲಕ ಆ ಭಾಗದ ಜನರ ಹತ್ತಾರು ವರ್ಷಗಳ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದು ಅವರು ವಿವರಿಸಿದರು.

- ಜಾಹೀರಾತು -

ಬಾಗಲಕೋಟೆ ಘಟನೆಗೆ ಖಂಡನೆ ಹಾಗೂ ಪ್ರತಿಭಟನೆ: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟವನ್ನು ಪ್ರತಾಪ್ ಸಿಂಹ ಕಠಿಣವಾಗಿ ಖಂಡಿಸಿದರು. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದಾಗಿ ಕಿಡಿಗೇಡಿಗಳಿಗೆ ಭಯವಿಲ್ಲದಂತಾಗಿದೆ ಎಂದು ಅವರು ಕಿಡಿಕಾರಿದರು. ಈ ಘಟನೆಯನ್ನು ಪ್ರತಿಭಟಿಸಿ ಮೈಸೂರಿನ ಕೇಂದ್ರ ಬಸ್ ನಿಲ್ದಾಣದ ಬಳಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಅಂತಿಮವಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಸಂಚಾರವನ್ನು ಸುಗಮಗೊಳಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಂಜಿನಿಯರ್ ಹಾಗೂ ಆಟೋ ಚಾಲಕನ ಬಂಧನ

January 2, 2026
ಮುಖಪುಟಮೈಸೂರು ಗ್ರಾಮಾಂತರ

ನಾಗರಹೊಳೆ ಬಳಿ ಮತ್ತೊಂದು ಹುಲಿ ಸೆರೆ! ಜನರಲ್ಲಿ ನಿಟ್ಟುಸಿರು

November 25, 2025
ಮುಖಪುಟಮೈಸೂರು ನಗರ

ಮೈಸೂರು: ಮಾದಕ ವಸ್ತು ಜಾಲದ ಶಂಕೆ – ಮೈಸೂರಿನ ಉದ್ಯಮಿಯನ್ನು ರಾಜಸ್ಥಾನಕ್ಕೆ ಕರೆದೊಯ್ದ ಎನ್‌.ಸಿ.ಬಿ

January 30, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರಾಗಿಂಗ್‌ : ವಿದ್ಯಾರ್ಥಿಗೆ ವೃಷಣ ಹಾನಿ- ಶಾಲಾ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ !

November 10, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?