ಚಾಮರಾಜನಗರ : ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಬೈಕ್ ರ್ಯಾಲಿಯನ್ನು ಏ.6 ರಂದು ಬೆಳಗ್ಗೆ 10:30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಕಮಿಟಿ ಅಧ್ಯಕ್ಷ ಆನಂದ್ ಪ್ರಕಾಶ್ ಮೀನಾ ಅವರು ಬೈಕ್ ರ್ಯಾಲಿಗೆ ಚಾಲನೆ ನೀಡುವರು.
ಬೈಕ್ ರ್ಯಾಲಿಯು ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಿಂದ ಎಲ್.ಐ.ಸಿ ವೃತ್ತ, ಸಂತೇಮರಹಳ್ಳಿ ವೃತ್ತ, ಪಚ್ಚಪ್ಪ ವೃತ್ತ, ರಾಮಸಮುದ್ರ ಮೂಲಕ ಸಾಗಿ ಜೋಡಿ ರಸ್ತೆ, ಪಚ್ಚಪ್ಪ ವೃತ್ತ, ಗುಂಡ್ಲುಪೇಟೆ ಸರ್ಕಲ್, ಗುಂಡ್ಲುಪೇಟೆ ರಸ್ತೆ ಮಾರ್ಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.