ಮಂಗಳೂರಿನ ಕೊಟ್ಟಾರ ಬಳಿಯ ಕೋಸ್ಟಲ್ ಬಾರ್ನಲ್ಲಿ ಕುಡಿತದ ಮತ್ತಿನಲ್ಲಿ ಯುವಕರ ಮಧ್ಯೆ ಮಾರಾಮಾರಿಯಾಗಿದೆ. ಬಿಯರ್ ಬಾಟಲಿ, ಸೋಡಾ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಬಾರ್ ನ ಕೌಂಟರ್ ಬಳಿಯೇ ರಕ್ತ ಚಿಮ್ಮುವಂತೆ ಯುವಕರು ಹೊಡೆದಾಡಿಕೊಂಡಿದ್ದಾರೆ. ಅಶೋಕ್ ಪೂಜಾರಿ ಎಂಬಾತನ ಮೇಲೆ ಬಿಯರ್ ಮತ್ತು ಸೋಡಾ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ.
