ಹನೂರು:ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಶುಕ್ರವಾರ ತಡರಾತ್ರಿ ಬೋನಿಗೆ ಬೀಳುವ ಮೂಲಕ ಜನರು ನಿಟ್ಟುಸಿರು ಬಿಡುವಂತೆ ಮಾಡಿದೆ.
ಇತ್ತೀಚಿಗೆ ಪಾಸ್ಕ ಮೇರಿ ಎಂಬುವವರ ಕುರಿಗಳನ್ನು ಬಲಿ ತೆಗೆದುಕೊಂಡಿತ್ತು. ಬಳಿಕ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನು ಅಳವಡಿಸಿತ್ತು.