PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹಂಪಿ ಎಎಸ್‌ಐ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ ಹಗರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಸಾಮಾಜಿಕ ಕಾರ್ಯಕರ್ತ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹಂಪಿ ಎಎಸ್‌ಐ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ ಹಗರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಸಾಮಾಜಿಕ ಕಾರ್ಯಕರ್ತ
ಮುಖಪುಟ

ಹಂಪಿ ಎಎಸ್‌ಐ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ ಹಗರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಸಾಮಾಜಿಕ ಕಾರ್ಯಕರ್ತ

Prathinidhi News
Last updated: January 16, 2026 1:20 pm
Prathinidhi News
Published January 16, 2026
Share
SHARE

ಹಂಪಿ, ಕನವರಿ 16,2026 : ಹಂಪಿ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ಅಧಿಕಾರಿಗಳು ಸುಮಾರು 1 ಕೋಟಿ ರೂಪಾಯಿಗಳ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಡಿ. ಧನಂಜಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

2013 ರಿಂದ 2023 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ, ಎಎಸ್‌ಐ ವ್ಯಾಪ್ತಿಯ ಸಂರಕ್ಷಿತ ಪ್ರದೇಶದಲ್ಲಿರುವ ತೆಂಗು ಮತ್ತು ಇತರ ಹಣ್ಣುಗಳ ಮಾರಾಟಕ್ಕೆ ಯಾವುದೇ ಟೆಂಡರ್ ಕರೆಯದೆ ಅಧಿಕಾರಿಗಳು ಆದಾಯವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದು ಇವರ ಪ್ರಮುಖ ಆರೋಪವಾಗಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಧನಂಜಯ ಅವರು ವಿವರ ಕೇಳಿದಾಗ, ಕಳೆದ ಹತ್ತು ವರ್ಷಗಳ ಯಾವುದೇ ದತ್ತಾಂಶ ಲಭ್ಯವಿಲ್ಲ ಎಂದು ಎಎಸ್‌ಐ ಪ್ರತಿಕ್ರಿಯೆ ನೀಡಿದ್ದು ಈ ಅನುಮಾನಕ್ಕೆ ಪುಷ್ಟಿ ನೀಡಿದೆ. ಇಲಾಖೆಯ ದಾಖಲೆಗಳ ಪ್ರಕಾರ ಕೇವಲ 894 ತೆಂಗಿನ ಮರಗಳು ಸೇರಿ ಅಲ್ಪ ಪ್ರಮಾಣದ ಹಣ್ಣಿನ ಮರಗಳಿವೆ ಎಂದು ತೋರಿಸಲಾಗಿದ್ದರೂ, ವಾಸ್ತವದಲ್ಲಿ ಸುಮಾರು 2,000ಕ್ಕೂ ಹೆಚ್ಚು ತೆಂಗಿನ ಮರಗಳು ಅಲ್ಲಿವೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ. ಕಳೆದ ವರ್ಷವಷ್ಟೇ ನಡೆಸಲಾದ ಟೆಂಡರ್‌ನಿಂದ ಸರ್ಕಾರಕ್ಕೆ 3.75 ಲಕ್ಷ ರೂಪಾಯಿ ಆದಾಯ ಬಂದಿರುವುದು ದಾಖಲೆಗಳಿಂದ ತಿಳಿದುಬಂದಿದೆ. ಆದರೆ ಹಿಂದಿನ ಹತ್ತು ವರ್ಷಗಳಲ್ಲಿ ಇಂತಹ ಯಾವುದೇ ಪ್ರಕ್ರಿಯೆ ನಡೆಯದ ಕಾರಣ ಸರ್ಕಾರಿ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅವರು ದೂರಿದ್ದಾರೆ.

ಈ ದೂರಿಗೆ ಪ್ರತಿಕ್ರಿಯಿಸಿರುವ ಎಎಸ್‌ಐ ಹಂಪಿ ವೃತ್ತವು, 2023ರಲ್ಲಿ ಟೆಂಡರ್ ಕರೆಯಲಾಗಿತ್ತಾದರೂ ಯಾರೂ ಬಿಡ್‌ನಲ್ಲಿ ಭಾಗವಹಿಸಿರಲಿಲ್ಲ ಎಂದು ಸಮರ್ಥಿಸಿಕೊಂಡಿದೆ. ಆದರೆ ಸರ್ಕಾರದ ಸ್ವಾಧೀನದಲ್ಲಿರುವ 234 ಎಕರೆ ಭೂಮಿಯಲ್ಲಿನ ಸಾವಿರಾರು ಮರಗಳ ಫಸಲು ಏನಾಯಿತು ಎಂಬ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಮತ್ತು ನಾಪತ್ತೆಯಾಗಿರುವ ಮರಗಳ ಸಂಖ್ಯೆ ಹಾಗೂ ಆದಾಯದ ಸೋರಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಧನಂಜಯ ಅವರು ಪ್ರಧಾನ ಮಂತ್ರಿಗಳು ಹಾಗೂ ಸಂಸ್ಕೃತಿ ಸಚಿವಾಲಯವನ್ನು ಒತ್ತಾಯಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಶೂ ಒಳಗೆ ಅಡಗಿದ್ದ ನಾಗರಹಾವಿನ ಮರಿ : ಉರಗತಜ್ಞ ಸ್ನೇಕ್ ಶಾಮ್ ರಿಂದ ಯಶಸ್ವಿ ರಕ್ಷಣೆ!

December 3, 2025
ಮುಖಪುಟರಾಜಕೀಯ

ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ, ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ : ಶಾಸಕ ಬಿ.ವೈ.ವಿಜಯೇಂದ್ರ

January 14, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ಮೈಸೂರು: ಪ್ರೀತಿಸಿದ ಯುವತಿಯ ಸಂಬಂಧಿಕರಿಂದ ಹಲ್ಲೆ ಆರೋಪ; ಯುವಕ ಆತ್ಮಹತ್ಯೆ

December 29, 2025
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂಗೆ ಹಕ್ಕೊತ್ತಾಯ: ಅಹಿಂದ ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ

November 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?