PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಆರ್‌ಎಸ್‌ಎಸ್‌ ಪ್ರಕಾರ ೨೦೦ ಸ್ಥಾನಗಳನ್ನು ಗೆಲ್ಲುವುದು ಕಷ್ಟ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಆರ್‌ಎಸ್‌ಎಸ್‌ ಪ್ರಕಾರ ೨೦೦ ಸ್ಥಾನಗಳನ್ನು ಗೆಲ್ಲುವುದು ಕಷ್ಟ
ಸಮಗ್ರ

ಆರ್‌ಎಸ್‌ಎಸ್‌ ಪ್ರಕಾರ ೨೦೦ ಸ್ಥಾನಗಳನ್ನು ಗೆಲ್ಲುವುದು ಕಷ್ಟ

ಪ್ರತಿನಿಧಿ
Last updated: April 13, 2024 5:57 pm
ಪ್ರತಿನಿಧಿ
Published April 13, 2024
Share
SHARE

ಚಿಕ್ಕಬಳ್ಳಾಪುರ : ೪೦೦ ಸ್ಥಾನಗಳನ್ನು ಗೆಲ್ಲುವುದಾಗಿ ಬಿಜೆಪಿ ಹೇಳುತ್ತಿದೆಯಾದರೆ ಆರ್‌ಎಸ್‌ಎಸ್‌ನ ಪ್ರಕಾರವೇ ೨೦೦ ಸ್ಥಾನಗಳನ್ನು ಗೆಲ್ಲುವುದು ಕಷ್ಟವಿದೆ. ೪೦೦ ಸ್ಥಾನ ಗೆಲ್ಲುತ್ತೇವೆ ಎನ್ನುವುದೂ ಚುನಾವಣಾ ತಂತ್ರದ ಭಾಗವಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ಎಲ್.ಹನುಮಂತಯ್ಯ ನುಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಬಾಂಡ್ ಮೂಲಕ ಬಿಜೆಪಿಯು ಭ್ರಷ್ಟಾಚಾರವನ್ನು ಕಾನೂನು ಬದ್ಧಗೊಳಿಸಲು ಮುಂದಾಗಿದೆ. ಕರ್ನಾಟಕವಷ್ಟೇ ಅಲ್ಲ ಬೇರೆ ಬೇರೆ ರಾಜ್ಯಗಳಲ್ಲಿಯೂ ಎದುರಾಳಿ ಪಕ್ಷಗಳ ನಾಯಕರನ್ನು ಐಟಿ, ಇಡಿ ತನಿಖೆ ಹೆಸರಿನಲ್ಲಿ ಬ್ಲಾಕ್‌ಮೇಲ್ ಮಾಡಲಾಗುತ್ತಿದೆ. ಈ ಹಿಂದೆ ತತ್ವ, ಸಿದ್ಧಾಂತದ ಪಕ್ಷ ಬಿಜೆಪಿ ಎನ್ನುತ್ತಿದ್ದರು. ಆದರೆ ಈಗ ಬೆದರಿಸುವುದೇ ತಂತ್ರವಾಗಿದೆ ಎಂದು ದೂರಿದರು.
ದೇಶದಲ್ಲಿ ಬಡತನ ಮಿತಿ ಮೀರಿದೆ, ಮಕ್ಕಳು ಅಪೌಷ್ಟಿಕತೆಯಿಂದ ಬಳುತ್ತಿದ್ದಾರೆ. ಆದರೆ ಈ ಅಂಕಿ ಅಂಶ ತಪ್ಪು ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಇದು ನಾಗರಿಕ ಸರ್ಕಾರದ ಲಕ್ಷಣವಲ್ಲ. ಬಿಜೆಪಿ ಕಳೆದ ೨೦ ವರ್ಷದಿಂದ ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬಂದಿತು. ಆದರೆ ಎಂದಿಗೂ ರಾಜ್ಯದ ಜನರು ಬಹುಮತ ನೀಡಿಲ್ಲ. ಶಾಸಕರಿಗೆ ಆಮಿಷವೊಡ್ಡಿ, ರಾಜೀನಾಮೆ ಕೊಡಿಸಿ ಸರ್ಕಾರ ಮಾಡಿದ್ದಾರೆ. ರಾಜ್ಯದ ಜನರು ಬಿಜೆಪಿಯನ್ನು ಮಾನ್ಯ ಮಾಡಿಲ್ಲ. ಜನಾಭಿಪ್ರಾಯ ಇಲ್ಲದೇ ಇದ್ದರೂ ವಾಮಮಾರ್ಗದ ಮೂಲಕ ಸರ್ಕಾರ ರಚಿಸಿದ್ದಾರೆ ಎಂದು ದೂರಿದರು.
ಜಿಎಸ್‌ಟಿ ತರಬೇಕು ಎಂದುಕೊಂಡಿದ್ದು ಕಾಂಗ್ರೆಸ್. ಆದರೆ ಆ ಸಮಯದಲ್ಲಿ ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳು ಜಿಎಸ್‌ಟಿ ವಿರೋಧಿಸಿದ್ದವು. ಆದರೆ ನಂತರ ಜಿಎಸ್‌ಟಿ ಹೆಸರಿನಲ್ಲಿ ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಅವೈಜ್ಞಾನಿಕವಾಗಿ ತೆರಿಗೆ ವಿಧಿಸಲಾಗುತ್ತಿದೆ. ಇಡ್ಲಿ, ಕಾಫಿ ಮೇಲೂ ತೆರಿಗೆ. ಇದನ್ನು ಪರಾಮರ್ಶಿಸಬೇಕು ಎನ್ನುವುದು ನಮ್ಮ ಒತ್ತಾಯ ಎಂದರು.
ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿಯು ಶ್ರೀಮಂತರಿಗೆ ಮಾತ್ರ ಎನ್ನುವ ಸ್ಥಿತಿ ಇದೆ. ನವದೆಹಲಿಯಲ್ಲಿ ರೈತರು ಹಕ್ಕುಗಳಿಗಾಗಿ ಒಂದು ವರ್ಷ ಹೋರಾಟ ಮಾಡಿದರೂ ಸಮಸ್ಯೆ ಪರಿಹಾರಕ್ಕೆ ಗಮನ ನೀಡಲಿಲ್ಲ ಎಂದರು.
ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಮುಖಂಡರಾದ ನಂದಿ ಆಂಜನಪ್ಪ, ಲಾಯರ್ ನಾರಾಯಣಸ್ವಾಮಿ ಯಲುವಳ್ಳಿ ಎನ್.ರಮೇಶ್, ಮರಸನಹಳ್ಳಿ ಪ್ರಕಾಶ್, ಕಳವಾರ ಶ್ರೀಧರ್, ಎಂ.ವಿ.ಕೃಷ್ಣಪ್ಪ ಇದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ನಾಳೆ ಅಂಬೇಡ್ಕರ್ ಜಯಂತಿ

April 12, 2024
ಸಮಗ್ರ

ಅಮಾನಿಕೆರೆಯಲ್ಲಿ ರಾಸಾಯನಿಕ ಮಿಶ್ರಣ

June 7, 2024
ಸಮಗ್ರ

ಜಿ.ಕೆ.ಹನುಮಪ್ಪ ಅವಿರೋಧ ಆಯ್ಕೆ

May 31, 2024
ಸಮಗ್ರ

ನೀತಿ ಆಯೋಗದ ಡೆಲ್ಟಾ ಶ್ರೇಯಾಂಕದಲ್ಲಿ ಮಸ್ಕಿ ತಾಲೂಕಿಗೆ ಪ್ರಥಮ ಸ್ಥಾನ

December 8, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?