PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಾಧನೆ ಸಾಧಕನ ಸ್ವತ್ತೆ ಹೊರತು ಸೋಮಾರಿಯ ಸ್ವತ್ತಲ್ಲ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಸಾಧನೆ ಸಾಧಕನ ಸ್ವತ್ತೆ ಹೊರತು ಸೋಮಾರಿಯ ಸ್ವತ್ತಲ್ಲ
ಸಮಗ್ರ

ಸಾಧನೆ ಸಾಧಕನ ಸ್ವತ್ತೆ ಹೊರತು ಸೋಮಾರಿಯ ಸ್ವತ್ತಲ್ಲ

ಪ್ರತಿನಿಧಿ
Last updated: May 7, 2024 6:32 pm
ಪ್ರತಿನಿಧಿ
Published May 7, 2024
Share
SHARE

ರಾಮನಗರ : ಸಾಧನೆ ಸಾಧಕನ ಸ್ವತ್ತೆ ಹೊರತು ಸೋಮಾರಿಯ ಸ್ವತ್ತಲ್ಲ. ಯಾರಲ್ಲಿ ಶ್ರದ್ಧೆ ಇರುತ್ತದೋ ಅವರು ಶಿಕ್ಷಣದಲ್ಲಿ ಉನ್ನತಿ ಸಾಧಿಸಬಹುದು. ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ, ಪ್ರಾಂಶುಪಾಲರ, ಅಧಿಕಾರಿಗಳ, ಪಾಲಕರ ಪಾತ್ರ ದೊಡ್ಡದಿರುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಂ.ಪಿ. ನಾಗಮ್ಮ ತಿಳಿಸಿದರು.

ಇಲ್ಲಿನ ಗೌಸಿಯಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವೀತೀಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾದ ಜಿಲ್ಲೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ವ್ಯಾಸಂಗದ ಅವಧಿಯಲ್ಲಿ ಸುಖ ಬಯಸದೆ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದಾಗ ಮಾತ್ರ ಸುಖ ಜೀವನ ನಡೆಸಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯ ಎಂದು ತಿಳಿಸಿದರು.

ಈ ಹಿಂದೆ ಹೆಣ್ಣುಮಕ್ಕಳಿಗೆ ಶಿಕ್ಷಣ ಪಡೆಯಲು ಉತ್ತಮ ಅವಕಾಶಗಳಿರಲಿಲ್ಲ. ಈಗ ಕಾಲ ಬದಲಾಗಿದ್ದು ಹೆಣ್ಣುಮಕ್ಕಳಿಗೆ ಅತ್ಯುನ್ನತ ಶಿಕ್ಷಣ ಸಿಗುತ್ತಿದೆ. ಸಮಾಜದಲ್ಲಿ ಮಹಿಳೆಯರು ಇಂದು ಉನ್ನತ ಸ್ಥಾನ ಮಾನ ಪಡೆದಿದ್ದಾರೆ. ಹೆಚ್ಚು ಹೆಚ್ಚು ಅವಕಾಶಗಳು ಸಿಗುತ್ತಿವೆ. ದ್ವಿತೀಯ ಪಿಯುಸಿ ತೇರ್ಗಡೆಯಾಗಿರುವ ನೀವು ಮುಂದೆ ಏನು ಮಾಡಬೇಕು ಎಂಬುದನ್ನು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ ಮುಂದೆ ಬೇಕಾದಷ್ಟು ಅವಕಾಶಗಳಿವೆ ಎಂದರು.

- ಜಾಹೀರಾತು -

ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ. ಶಿವಣ್ಣ ಮಾತನಾಡಿ, ಜಗತ್ತಿನಲ್ಲಿ ಜಾತಿ ಧರ್ಮ ಪಂಥ ಮೀರಿದ್ದು ಶಿಕ್ಷಣ. ಸಾರ್ವಜನಿಕರ ಬದುಕಿನಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಶಿಕ್ಷಣ ಕಲಿಸುತ್ತದೆ. ಶಿಕ್ಷಣದಿಂದಲೇ ಇಂದು ಜಗತ್ತು ಇಷ್ಟೊಂದು ಮುಂದುವರೆದಿದೆ. ಶಿಕ್ಷಣ ಸಂಸ್ಥೆಗಳು ಜಗತ್ತಿನ ದೇವಾಲಯಗಳಿದ್ದಂತೆ ಎಂದು ತಿಳಿಸಿದರು.

ಗೌಸಿಯಾ ತಾಂತ್ರಿಕ, ಶೈಕ್ಷಣಿಕ ಟ್ರಸ್ಟ್ ಕಾರ್ಯದರ್ಶಿ ಉಮರ್ ಇಸ್ಮಾಯಿಲ್ ಖಾನ್ ಮಾತನಾಡಿ, ಗೌಸಿಯಾ ಎಂಜಿನಿಯರಿಂಗ್ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡಿ ಉತ್ತಮ ಸಾಧಕರಾಗಲು ಪ್ರೋತ್ಸಾಹಿಸುತ್ತಾ ಬರುತ್ತಿದೆ. ಶೃದ್ಧೆ, ವಿನಯ, ಭಯ, ಭಕ್ತಿಯಿಂದ ಶಿಕ್ಷಣ ಪಡೆದಾಗ ಜೀವನದಲ್ಲಿ ಯಶಸ್ಸು ನಮ್ಮದಾಗುತ್ತದೆ ಎಂದರು.

ಗೌಸಿಯಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಂ.ಪಿ. ನಜರುಲ್ಲಾಖಾನ್ ಮಾತನಾಡಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಪದವಿಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದಲ್ಲಿ ಪ್ರಥಮ ದ್ವಿತೀಯ ಸ್ಥಾನ ಪಡೆದ 64 ವಿದ್ಯಾರ್ಥಿಗಳಿಗೆ, ಕಾಲೇಜು ಮುಖ್ಯಸ್ಥರಿಗೆ ಮಕ್ಕಳ ಪಾಲಕರಿಗೆ ಗೌಸಿಯಾ ಕಾಲೇಜು ವತಿಯಿಂದ ಇಂದಿನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ. ಇದು ನಮ್ಮ ಸಂಸ್ಥೆಯ ಗೌರವಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಗೌಸಿಯಾ ಸಂಸ್ಥೆ ಅಧ್ಯಕ್ಷ ಡಾ. ಅಹಮದ್ ಷರೀಫ್ ಸಿರಾಜ್, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಜಾಹಿರ್ ಹಸನ್ ಇತರರು ಇದ್ದರು.

 

ಉನ್ನತ ದರ್ಜೆಯಲ್ಲಿ ಉತ್ತೀರ್ಣರಾದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನವದೆಹಲಿಮುಖಪುಟರಾಜಕೀಯಸಮಗ್ರ

ಮೋದಿ ಪ್ರಮಾಣವಚನ: ಇಡೀ ದೆಹಲಿಗೆ 3 ಹಂತದ ಭದ್ರತಾ ವ್ಯವಸ್ಥೆ

June 9, 2024
ಸಮಗ್ರ

ಕಿವುಡರ ಒಲಿಂಪಿಕ್‌ ವಿಜೇತ ವಿರೇಂದರ್‌ ಪದ್ಮಶ್ರೀ ವಾಪಸ್‌

December 24, 2023
ಕೊನೆಯಪುಟಸಮಗ್ರ

ಅವಧಿ ಮೀರಿದ ತಿಂಡಿ ಗೋದಾಮಿಗೆ ಕರವೇ ದಾಳಿ

March 24, 2024
ಸಮಗ್ರ

ದೇಶದಲ್ಲಿ 20 ಕೊರೊನಾ ಜೆಎನ್​1 ಪ್ರಕರಣ, ಕರ್ನಾಟಕದಲ್ಲಿ ಒಂದು ಸಾವು

December 20, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?