PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಮೋದಿ ಸಂವಾದ; ಪ್ರಚಾರ ತಂತ್ರಗಳೇಗಿರಬೇಕು ಎಂದು ಕಾರ್ಯಕರ್ತರಿಗೆ ಸಲಹೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಮೋದಿ ಸಂವಾದ; ಪ್ರಚಾರ ತಂತ್ರಗಳೇಗಿರಬೇಕು ಎಂದು ಕಾರ್ಯಕರ್ತರಿಗೆ ಸಲಹೆ
ಮುಖಪುಟ

ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಮೋದಿ ಸಂವಾದ; ಪ್ರಚಾರ ತಂತ್ರಗಳೇಗಿರಬೇಕು ಎಂದು ಕಾರ್ಯಕರ್ತರಿಗೆ ಸಲಹೆ

Prathinidhi News
Last updated: April 5, 2024 5:44 pm
Prathinidhi News
Published April 5, 2024
Share
SHARE

ಬೆಂಗಳೂರು: ಪ್ರಧಾನಿ ಮೋದಿ  ಶುಕ್ರವಾರ ಕರ್ನಾಟಕದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಜೊತೆ ಸಂವಾದ ನಡೆಸಿದರು. ನಮೋ ಆ್ಯಪ್ ಪ್ಲಾಟ್​ಫಾರ್ಮ್​ನಲ್ಲಿ ಲೈವ್ ಆಗಿ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಬೂತ್ ಅಧ್ಯಕ್ಷರು ಮೋದಿ ಅವರ ಜೊತೆ ಮಾತನಾಡಿದರು. ಈ ವೇಳೆ ನರೇಂದ್ರ ಮೋದಿ ಅವರು ಕಾರ್ಯಕರ್ತರಿಗೆ ಪಕ್ಷದ ಪ್ರಚಾರ ತಂತ್ರಗಳನ್ನು ತಿಳಿಸಿಕೊಟ್ಟರು. ಹಾಗೆಯೇ, ಬೂತ್ ಮಟ್ಟದಲ್ಲಿ ಚುನಾವಣಾ ಪ್ರಚಾರ ಯಾವ ರೀತಿಯಲ್ಲಿ ಸಾಗುತ್ತಿದೆ ಎಂಬುದನ್ನು ವಿಚಾರಿಸಿದರು.

ಕೇಂದ್ರ ಸರ್ಕಾರದ ಸಾಧನೆಗಳನ್ನು ಜನತೆಗೆ ಮುಂದಿಡುತ್ತಿದ್ದೀರಾ? ಬೂತ್​ನಲ್ಲಿ ಎಲ್ಲಾ ಚುನಾವಣಾ ಸಾಮಗ್ರಿಗಳು ತಲುಪಿವೆಯಾ? ಪೇಜ್ ಲೀಡರ್​ಗಳಿಗೆ ಹೇಗೆ ಕೆಲಸ ಹಂಚಲಾಗಿದೆ? ಪನ್ನಾ ಪ್ರಮುಖರು ಎಲ್ಲಾ ಮನೆಗಳಿಗೆ ಹೋಗಿದ್ದಾರಾ? ವೋಟರ್ಸ್ ಲಿಸ್ಟ್​ನಲ್ಲಿರುವ ಮನೆಗಳಲ್ಲಿ ಮತದಾರರು ಯಾರಿದ್ದಾರೆ? ಪಟ್ಟಿಯಲ್ಲಿದ್ದವರಲ್ಲಿ ಯಾರು ಇಲ್ಲ ಇವೆಲ್ಲಾ ಮಾಹಿತಿ ಸಂಗ್ರಹಿಸುತ್ತಿದ್ದೀರಾ? ಎಂಬೆಲ್ಲಾ ಪ್ರಶ್ನೆಗಳನ್ನು ಮತ್ತು ಮಾಹಿತಿಯನ್ನು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕೇಳಿದರು.

ಎಲ್ಲಾ ಮತದಾರರನ್ನು ಭೇಟಿ ಮಾಡಬೇಕು. ಎಲ್ಲಾ ಮತದಾರರ ಜೊತೆ ಒಂದೇ ರೀತಿಯಲ್ಲಿ ಮಾತನಾಡಬಾರದು. ವಿವಿಧ ವರ್ಗದ ಮತದಾರರೊಂದಿಗೆ ಯಾವ್ಯಾವ ರೀತಿಯಲ್ಲಿ ಮಾತನಾಡಬೇಕು ಎಂಬುದನ್ನು ತಿಳಿದಿರಬೇಕು. ಸಾಮಾನ್ಯ ಮತದಾರರಿಗೆ ಅವರಿಗೆ ತಿಳಿಯುವ ರೀತಿಯಲ್ಲಿ ಮಾಹಿತಿ ನೀಡಬೇಕು. ಫಲಾನುಭವಿಗಳೊಂದಿಗೆ ಬೇರೆ ರೀತಿಯಲ್ಲಿ ಸಂವಹನ ನಡೆಸಬೇಕು. ಹೇಗೆ ಮಾತನಾಡಬೇಕು ಎಂದು ಮೊದಲೇ ಒಂದು ಡೈರಿ ಮೈಂಟೇನ್ ಮಾಡಬೇಕು ಎಂದು ಬೂಟ್ ಮಟ್ಟದ ಕಾರ್ಯಕರ್ತರಿಗೆ ಮೋದಿ ಸಲಹೆ ನೀಡಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಭರವಸೆಗಳನ್ನು ಈಡೇರಿಸಲು ಯಾವ ರೀತಿ ವಿಫಲವಾಗಿದೆ, ಎಷ್ಟು ಭ್ರಷ್ಟಾಚಾರ ಎಸಗುತ್ತಿದೆ ಎಂಬುದನ್ನು ಮತದಾರರಿಗೆ ತಿಳಿಸಬೇಕು. ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಇರುವುದು ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಿ. ಎರಡೂ ಪಕ್ಷಗಳ ಕಾರ್ಯಕರ್ತರ ಜೊತೆ ಸಮನ್ವಯ ಸಭೆ ನಡೆಯಬೇಕು ಎಂದೂ ಪ್ರಧಾನಿಗಳು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ತಿಳಿಹೇಳಿದರು.

- ಜಾಹೀರಾತು -

ಕೇಂದ್ರ ಸರ್ಕಾರ ಇಷ್ಟೆಲ್ಲಾ ಕೆಲಸ ಮಾಡಿದರೂ ಏನೂ ಮಾಡಿಯೇ ಇಲ್ಲ ಎಂದು ನೆಗಟಿವ್ ಆಗಿ ಹೇಳುವ ಜನರಿರುತ್ತಾರೆ. ನೀವು ಸರ್ಕಾರದ ಸಾಧನೆಗಳೇನು ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು. ಚುನಾವಣಾ ಪ್ರಚಾರ ಮಾಡುವುದು ಒಂದು ಕೆಲಸವಾದರೆ, ಮತದಾರರ ಬೆಂಬಲ ಗಟ್ಟಿಗೊಳಿಸುವುದೂ ಮತ್ತೊಂದು ಮಹತ್ವದ ಕೆಲಸ ಎಂದರು.

ಇದೇ ವೇಳೆ, ಉಡುಪಿಯ ಕಾರ್ಯಕರ್ತರೊಬ್ಬರ ಜೊತೆ ಮಾತನಾಡುತ್ತಾ ನರೇಂದ್ರ ಮೋದಿ ಅವರು ಉಡುಪಿ ಹಾಗು ತಮಗೆ ಇರುವ ಅನನ್ಯ ಸಂಬಂಧದ ಬಗ್ಗೆ ಬೆಳಕು ಚೆಲ್ಲಿದರು. ಉಡುಪಿಯಲ್ಲಿರುವ ಶ್ರೀಕೃಷ್ಣನ ಮೂರ್ತಿಯು ಸಮುದ್ರದಲ್ಲಿ ಮುಳುಗಿರುವ ದ್ವಾರಕಾದಿಂದ ತಂದು ಪ್ರತಿಷ್ಠಾಪಿಸಲಾಗಿದೆ. ಹಾಗೆಯೇ ಉಡುಪಿಯ ಪೇಜಾವರ ಶ್ರೀಗಳಾಗಿದ್ದ ವಿಶ್ವೇಶತೀರ್ಥ ಜೊತೆ ತನಗೆ ಆಪ್ತ ಸಂಬಂಧ ಇತ್ತು ಎಂದಿದ್ದಾರೆ.

ಮೈಸೂರು, ಬೆಳಗಾವಿ, ಶಿವಮೊಗ್ಗ, ಉಡುಪಿ ಇತ್ಯಾದಿ ವಿವಿಧ ಜಿಲ್ಲೆಗಳ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಪ್ರಧಾನಿಗಳು ಈ ಸಂವಾದ ನಡೆಸಿದರು.

ಕರ್ನಾಟಕದಲ್ಲಿ ಎಪ್ರಿಲ್ 26 ಮತ್ತು ಮೇ 7ರಂದು ತಲಾ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಜೂನ್ 5ಕ್ಕೆ ಮತ ಎಣಿಕೆ ಆಗಲಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಸಿನಿಮಾ

bigbosskannada: ಬಿಗ್‌ ಬಾಸ್‌ ಕನ್ನಡ 11ಕ್ಕೆ ಅದ್ದೂರಿ ತೆರೆ ; ಹಳ್ಳಿ ಹಕ್ಕಿ ಹನುಮಂತು ವಿನ್ನರ್..!

January 27, 2025
ಮುಖಪುಟಮೈಸೂರು ನಗರರಾಜಕೀಯ

KRS ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಟ್ಟರೆ ತಪ್ಪೇನಿಲ್ಲ.! : ಸಿಎಂ ಪರ ಜಿಟಿಡಿ ಬ್ಯಾಟಿಂಗ್‌

December 28, 2024
ಬೆಂಗಳೂರುಮುಖಪುಟ

ಇನ್‌ಸ್ಟಾದಲ್ಲಿ ಲವ್ವಿ ಡವ್ವಿ : 13 ವರ್ಷದ ದಾಂಪತ್ಯಕ್ಕೆ ಫುಲ್ ಸ್ಟಾಪ್‌ ಇಟ್ಟು ಪ್ರಿಯಕರನೊಂದಿಗೆ ಹೆಂಡತಿ ಎಸ್ಕೇಪ್‌ …!

April 9, 2025
ಬೆಂಗಳೂರುಮುಖಪುಟರಾಜಕೀಯ

ಧರ್ಮಸ್ಥಳ ವಿರುದ್ಧದ “ಅಪಪ್ರಚಾರ”ದ ಹಿಂದೆ ಬಿಜೆಪಿ ಮತ್ತು ಅದರ ಸಹಚರರ ಕೈವಾಡವಿದೆ : ಡಿಸಿಎಂ ಡಿಕೆಶಿ ಗಂಭೀರ ಆರೋಪ

September 2, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?