PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಿಎಂ, ಪ್ರಭಾವಿ ಸಚಿವರಿದ್ದರೂ ಟಿ ನರಸೀಪುರಕ್ಕಿಲ್ಲ ಕ್ರೀಡಾಂಗಣದ ಭಾಗ್ಯ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಿಎಂ, ಪ್ರಭಾವಿ ಸಚಿವರಿದ್ದರೂ ಟಿ ನರಸೀಪುರಕ್ಕಿಲ್ಲ ಕ್ರೀಡಾಂಗಣದ ಭಾಗ್ಯ..!
ಮುಖಪುಟಮೈಸೂರು ಗ್ರಾಮಾಂತರರಾಜಕೀಯ

ಸಿಎಂ, ಪ್ರಭಾವಿ ಸಚಿವರಿದ್ದರೂ ಟಿ ನರಸೀಪುರಕ್ಕಿಲ್ಲ ಕ್ರೀಡಾಂಗಣದ ಭಾಗ್ಯ..!

Prathinidhi News
Last updated: January 22, 2025 2:07 pm
Prathinidhi News
Published January 22, 2025
Share
SHARE

ಮೈಸೂರು, ಜನವರಿ 22, 2025: ರಾಜ್ಯದ ಸಿಎಂ ಮತ್ತು ಪ್ರಭಾವಿ ಸಚಿವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕ್ರೀಡಾಪಟುಗಳಿಗಿಲ್ಲ ಕ್ರೀಡಾಂಗಣ. ಮೈಸೂರು ಜಿಲ್ಲೆಯ ವರುಣ ಮತ್ತು ಟಿ ನರಸೀಪುರ ಎರಡು ಕ್ಷೇತ್ರಕ್ಕೂ ಸೇರಿಕೊಂಡಿರುವ ಟಿ ನರಸೀಪುರ ಪಟ್ಟಣದಲ್ಲಿ ಕ್ರೀಡಾಂಗಣಕ್ಕಾಗಿ ಕ್ರೀಡಾಪಟುಗಳು ಹಾತೊರೆಯುತ್ತಿದ್ದರೂ, ಜನಪ್ರತಿನಿಧಿಗಳು ಮಾತ್ರ ಯಾರೂ ಕೂಡಾ ಕ್ಯಾರೆ ಎನ್ನುತ್ತಿಲ್ಲ. 

ಟಿ ನರಸೀಪುರ ತಾಲ್ಲೂಕನ್ನ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿರುವ ಅನೇಕ ಕ್ರೀಡಾಪಟುಗಳು ಇಲ್ಲಿದ್ದಾರೆ. ಇತ್ತೀಚೆಗೆ ಭಾರತ ಮಹಿಳಾ ಖೋಖೋ ತಂಡಕ್ಕೆ ಆಯ್ಕೆಯಾಗಿ ಪ್ರಶಸ್ತಿ ಗೆಲ್ಲುವಲ್ಲಿ ಗಮನಾರ್ಹ ಸಾಧನೆಗೈದಿರುವ ಕ್ರೀಡಾಪಟು ಚೈತ್ರ ಕೂಡ ಟಿ ನರಸೀಪುರ ಕ್ಷೇತ್ರದವರೇ. ಈ ಕ್ಷೇತ್ರದಲ್ಲಿ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಲ್ಲದೆ ವರುಣ ಕ್ಷೇತ್ರದಿಂದ ಶಾಸಕರಾಗಿ ಸಿಎಂ ಆಗಿರುವ ಸಿದ್ದರಾಮಯ್ಯ, ಮತ್ತು ಟಿ ನರಸೀಪುರ ಕ್ಷೇತ್ರದಿಂದ ಶಾಸಕರಾಗಿ ಸಚಿವರಾಗಿರುವ ಡಾ. ಹೆಚ್ ಸಿ ಮಹದೇವಪ್ಪ ಇಬ್ಬರು ಪ್ರಭಾವಿ ನಾಯಕರು ಪ್ರತಿನಿಧಿಸುತ್ತಿರುವ ಕ್ಷೇತ್ರ ಇದಾಗಿದೆ. ಟಿ ನರಸೀಪುರ ಪುರಸಭೆಯ ಒಟ್ಟು 23 ವಾರ್ಡ್ ಪೈಕಿ, 16ವಾರ್ಡ್ ಗಳು ವರುಣ, 7 ವಾರ್ಡ್ ಗಳು ಟಿ ನರಸೀಪುರ ಕ್ಷೇತ್ರಕ್ಕೆ ಹಂಚಿಕೆಯಾಗಿವೆ. ತಾಲ್ಲೂಕು ಕ್ರೀಡಾಂಗಣಕ್ಕಾಗಿ  ಕ್ರೀಡಾಪಟುಗಳು, ಟಿ ನರಸೀಪುರದ ಜನತೆ ಹಾತೊರೆಯುತ್ತಿದ್ದರೂ ಕ್ಷೇತ್ರದ ನಾಯಕರು ಮಾತ್ರ ಕ್ರೀಡಾಂಗಣ ನಿರ್ಮಾಣಕ್ಕೆ ಉತ್ಸಾಹ ತೋರದ ಹಿನ್ನೆಲೆ ಸಾರ್ವಜನಿಕರು ಬೇಸರ ಹೊರ ಹಾಕಿದ್ದಾರೆ.

2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಬಳಿಕ, ಮೂರು ಬಾರಿ ಟಿ ನರಸೀಪುರದಿಂದ ಶಾಸಕರಾಗಿ ಡಾ. ಹೆಚ್ ಸಿ ಮಹದೇವಪ್ಪ ಆಯ್ಕೆಯಾಗಿದ್ದಾರೆ. ಅತ್ತ ವರುಣ ಕ್ಷೇತ್ರದಿಂದಲೇ ಶಾಸಕರಾಗಿ ಆಯ್ಕೆಯಾಗಿ ಎರಡು ಬಾರಿ  ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ರಾಜ್ಯದ ಪವರ್ ಫುಲ್ ಸಿಎಂ, ಪವರ್ ಫುಲ್ ಮಿನಿಸ್ಟರ್ ಕ್ಷೇತ್ರದವರೇ ಆದರೂ ಕ್ಷೇತ್ರದಲ್ಲಿ ಮಾತ್ರ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗದ ಡಾ. ಹೆಚ್ ಸಿ ಮಹದೇವಪ್ಪ, ಸಿದ್ದರಾಮಯ್ಯ ವಿರುದ್ಧ ಕ್ಷೇತ್ರದ ಜನರು ಆಕ್ರೋಶ ಹೊರಹಾಕಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಮೈಸೂರು ಜಿಲ್ಲೆಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು ..!

May 28, 2025
ಚುನಾವಣೆಮುಖಪುಟಮೈಸೂರು ನಗರರಾಜಕೀಯ

2024ರ ಹೊತ್ತಿಗೆ ಕರ್ನಾಟಕದ ರಸ್ತೆಗಳು ಅಮೆರಿಕಾದ ರಸ್ತೆಗಳಿಗೆ ಸಮನಾಗಿ ಇರಲಿವೆ: ನಿತಿನ್ ಗಡ್ಕರಿ

March 10, 2024
ಮುಖಪುಟಹಾಸನ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: 4 ಗಂಟೆ ಕಾಲ ನಡೆದ ಸ್ಥಳ ಮಹಜರು

June 9, 2024
ನಂಜನಗೂಡುಮುಖಪುಟಮೈಸೂರು ಗ್ರಾಮಾಂತರ

ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭೀಣಿ, ಬಾಣಂತಿಯರ ಪರದಾಟ..! ತಾಲೂಕಿನ ದೊಡ್ಡಾಸ್ಪತ್ರೆಯಲ್ಲಿ ವೈದ್ಯರಿಲ್ಲ ಯಾಕೆ.?

March 5, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?