PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಣೆ
ಮೈಸೂರು ಗ್ರಾಮಾಂತರ

ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಣೆ

ಪ್ರತಿನಿಧಿ
Last updated: April 14, 2024 7:02 pm
ಪ್ರತಿನಿಧಿ
Published April 14, 2024
Share
SHARE

ತಾಲೂಕಿನ ವಿವಿಧೆಡೆ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ತಾಲೂಕಿನ ತಾಲ್ಲೂಕು ಪಂಚಾಯಿತಿ, ಪಿಡಬ್ಲ್ಯೂಡಿ, ಭೀಮಾ ಮಹಿಳಾ ವಿವಿಧೋದ್ದೇಶ ಸೇವಾ ಸಂಘ ಮತ್ತು ವತಿಯಿಂದ ಮಹಾನ್ ಮಾನವತಾವಾದಿ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ಆಚರಿಸಲಾಯಿತು.

ತಾಲೂಕು ಆಡಳಿತದ ವತಿಯಿಂದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಚಂದ್ರಶೇಖರ್ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಕಾರ್ಯಕ್ರಮಕ್ಕೆ ನೀಡಿದರು. ಅಂಬೇಡ್ಕರ್ ಅವರು ಮಹಾನ್ ಮೇಧಾವಿಗಳು ಇಂತಹ ವ್ಯಕ್ತಿಗಳ ಜಯಂತಿ ಆಚರಣೆ ಮಾಡುವುದು ಭಾರತೀಯರಾದ ನಮ್ಮೆಲ್ಲರ ಸೌಭಾಗ್ಯ. ಬಡತನದ ನಡುವೆ ಇವರು ವಿದೇಶದಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದು ದೇಶದಲ್ಲಿ ಹೆಚ್ಚು ಪದವೀಗಳನ್ನು ಪಡೆದವರಲ್ಲಿ ಅಗ್ರಗಣ್ಯರು. ಇವರು ದೇಶಕ್ಕೆ ಸಮರ್ಥ ಸಂವಿಧಾನವನ್ನು ರಚಿಸಿಕೊಟ್ಟರು ಎಂದರು.

ತಹಸೀಲ್ದಾರ್ ಟಿ. ಜಿ. ಸುರೇಶ್ ಆಚಾರ್ ಮಾತನಾಡಿ, ಮಹನೀಯರ ಜಯಂತಿಯನ್ನು ಆಚರಿಸುವುದು ಮುಖ್ಯವಲ್ಲ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಬಿಇಒ ಜಿ. ಶೋಭಾ, ಇನ್ಸ್ಪೆಕ್ಟರ್ ಮೇದಪ್ಪ, ತಾ. ಪಂ. ವ್ಯವಸ್ಥಾಪಕಿ ಶಿಲ್ಪಾ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶ್ವೇತ, ಲೋಕೋಪಯೋಗಿ ಎಇಇ ಸತೀಶ್ ಚಂದ್ರನ್, ಸಮಾಜ ಕಲ್ಯಾಣಾಧಿಕಾರಿ ರಾಮೇಗೌಡ, ಪುರಸಭೆ ಮುಖ್ಯಾಧಿಕಾರಿ ವಸಂತಕುಮಾರಿ, ಸರ್ವೇ ಇಲಾಖೆಯ ಎಡಿ ಪಂಚಲಿಂಗಪ್ಪ, ಸರ್ಕಾರಿ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್ ಡಿ. ಮಾದಪ್ಪ, ತಾಲೂಕು ಅಂಬೇಡ್ಕರ್ ಸಂಘದ ಅಧ್ಯಕ್ಷ ಕರೋಹಟ್ಟಿ ಮಹದೇವಯ್ಯ, ತಾ. ಪಂ. ಮಾಜಿ ಉಪಾಧ್ಯಕ್ಷ ಪ್ರಸನ್ನ, ವಿಚಾರವಾದಿ ಪ್ರಭುಸ್ವಾಮಿ, ತಾಲೂಕು ಬಾಬು ಜಗಜೀವನ್ ರಾಮ್ ಸಂಘದ ಅಧ್ಯಕ್ಷ ಹುಣಸೂರು ಪುಟ್ಟಯ್ಯ, ಮೂಗೂರು ಸಿದ್ದರಾಜು, ಆಲಗೂಡು ಪುಟ್ಟಮಲ್ಲಯ್ಯ ಯಾದಡೋರೆ ಮಹಾದೇವಯ್ಯ ಅಧಿಕಾರಿವರ್ಗದವರು ಹಾಜರಿದ್ದರು.

- ಜಾಹೀರಾತು -

ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಎಎಇ ಸತೀಶ್ ಚಂದ್ರನ್ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಇ ಮೋಹನ್,ಶಿವಸ್ವಾಮಿ, ಜೆಇ ರಮ್ಯಾ, ಪೂರ್ಣಿಮಾ, ಅಮೋಘ, ಹರೀಶ್, ಎಫ್ ಡಿಎ ಮಂಜುನಾನಾಥ್,ಸುಹಾಸ್, ರೇಖಾ, ಶಶಿಕಮಾರ್, ಬಾಲು ಇತರರು ಹಾಜರಿದ್ದರು.

ಭೀಮಾ ಮಹಿಳಾ ವಿವಿದ್ಧೇಶ ಸೇವಾ ಮತ್ತು ಸಹಕಾರ ಸಂಘದ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಉಪಾಧ್ಯಕ್ಷೆ ಸಾಕಮ್ಮ, ಕಾರ್ಯದರ್ಶಿ ಕೋಮಲಾಕ್ಷಿ ನಾಗರಾಜು, ಖಜಾಂಚಿ ಶ್ವೇತ, ಪ್ರಧಾನ ಕಾರ್ಯದರ್ಶಿ ಹೊನ್ನಮ್ಮ, ನಿರ್ದೇಶಕರಾದ ಸೌಭಾಗ್ಯ, ಮಲ್ಲಜಮ್ಮ, ನಾಗಮಣಿ, ರೋಜಾ ಇತರರು ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ತಾಂಡವಪುರ ಗ್ರಾಮದಲ್ಲಿ ಬಸವಣ್ಣನವರ ಜಯಂತಿ ಮಹೋತ್ಸವ

May 8, 2025
ಮುಖಪುಟಮೈಸೂರು ಗ್ರಾಮಾಂತರ

ಜಿಂಕೆ, ಕಾಡು ಹಂದಿಗಳ ಹಾವಳಿಯಿಂದಾಗಿ ಸಾವಿರಾರು ಮೌಲ್ಯದ ಬೆಳೆ ನಾಶ

February 20, 2025
ಮುಖಪುಟಮೈಸೂರು ಗ್ರಾಮಾಂತರ

ಪ್ರತಿನಿಧಿ ನ್ಯೂಸ್ ಇಂಪ್ಯಾಕ್ಟ್: ಅನಧಿಕೃತ ಶುಂಠಿ ಶುದ್ಧೀಕರಣ ಘಟಕಗಳನ್ನು ತೆರವುಗೊಳಿಸುವಂತೆ ಆದೇಶ

December 13, 2024
ಮೈಸೂರು ಗ್ರಾಮಾಂತರ

ಒಂದು ಸಮುದಾಯದಿಂದ ಜನನಾಯಕನಾಗಲು ಸಾಧ್ಯವಿಲ್ಲ

April 4, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?