ಮೈಸೂರು, ಜುಲೈ 10, 2026 : ನಗರದ ಹೃದಯಭಾಗದಲ್ಲಿರುವ ಟೌನ್ ಹಾಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರು ಫುಟ್ಪಾತ್ ಮೇಲೆಯೇ ಏಕಾಏಕಿ ಹೃದಯಾಘಾತದಿಂದ ಪ್ರಾಣ ಬಿಟ್ಟಿರುವ ಅತ್ಯಂತ ದುರದ್ರಷ್ಟಕರ ಘಟನೆ ಸಂಭವಿಸಿದೆ. ಮೈಸೂರಿನ ಆಲನಹಳ್ಳಿ ನಿವಾಸಿಯಾದ ಸುಮಾರು 65 ವರ್ಷದ ನಾರಾಯಣ ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ರಸ್ತೆಯಲ್ಲಿ ಚೆನ್ನಾಗಿಯೇ ನಡೆದುಕೊಂಡು ಬರುತ್ತಿದ್ದ ನಾರಾಯಣ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಸುಸ್ತಾಗಿದೆ. ಬಿಪಿ (ರಕ್ತದೊತ್ತಡ) ಸಮಸ್ಯೆಯಿಂದ ಬಳಲುತ್ತಿದ್ದ ಅವರು ತಕ್ಷಣವೇ ಫುಟ್ಪಾತ್ ಮೇಲೆ ಕುಳಿತು, ತಮ್ಮ ಬಳಿಯಿದ್ದ ಮಾತ್ರೆ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಕುಳಿತುಕೊಳ್ಳುತ್ತಿದ್ದಂತೆ ಎದೆ ಹಿಡಿದುಕೊಂಡ ಅವರು ಕೆಲವೇ ನಿಮಿಷಗಳಲ್ಲಿ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ತೀವ್ರ ಹೃದಯಾಘಾತದಿಂದಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರು ಮೃತದೇಹದ ಬಳಿ ತಬ್ಬಿ ಕಣ್ಣೀರಿಡುತ್ತಿರುವುದು ನೆರೆದಿದ್ದವರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದೆ.
