ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್, ಆಪರೇಷನ್ ಹಸ್ತವನ್ನು ಕ್ಷೇತ್ರದಿಂದ ಕ್ಷೇತ್ರಕ್ಕೆ ವಿಸ್ತರಿಸುತ್ತಿದೆ. ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ನಾಯಕರ ಸೆಳೆಯುವ ಪ್ರಯತ್ನ ಮುಂದುವರಿಸಲಾಗಿದ್ದು, ಪದ್ಮನಾಭ ನಗರ ಕ್ಷೇತ್ರದ ಬಳಿಕ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲೂ ಆಪರೇಷನ್ಗೆ ಕೈಹಾಕಲಾಗಿದೆ. ಮಾಜಿ ಕಾರ್ಪೋರೇಟರ್ಗಳನ್ನು ಸೆಳೆಯಲು 10 ಮಂದಿ ಆಪ್ತರ ತಂಡವನ್ನೇ ಡಿಕೆ ಶಿವಕುಮಾರ್ ಅವರು ಸಿದ್ಧಪಡಿಸಿದ್ದಾರೆ. ಈ ತಂಡ ಬಿಜೆಪಿ ನಾಯಕರೊಂದಿಗೆ ಸಂಪರ್ಕ ನಡೆಸುತ್ತಿದ್ದು, ಬಿಜೆಪಿ ಮಾಜಿ ಕಾರ್ಪರೇಟರ್ಗಳು ಕಾಂಗ್ರೆಸ್ ಸೇರಲು ಒಲವು ಹೊಂದಿದ್ದಾರೆ ಎಂದು ತಿಳಿದುಬಂದಿದೆ.
