ತುಮಕೂರು, (ಅಕ್ಟೋಬರ್ 25): ಹುಲಿ (tiger )ಉಗುರು ಧರಿಸಿದ್ದಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನದ ಬೆನ್ನಲ್ಲೇ ಹಲವರಿಗೆ ಢವ ಢವ ಶುರುವಾಗಿದೆ. ಹೌದು…ಹುಲಿ ಉಗುರಿನ ಲಾಕೆಟ್(tiger claw pendant) ಧರಿಸಿಕೊಂಡಿದ್ದು, ಇದೀಗ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಅದರಂತೆ ಇದೀಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯ ಶನಿಮಹಾತ್ಮ ದೇವಾಲಯದ ಅರ್ಚಕ ಧನಂಜಯ ಗುರೂಜಿ (dhananjaya guruji) ಈ ಹುಲಿ ಉಗುರಿನ ಸುಳಿಯಲ್ಲಿ ಸಿಲುಕಿದ್ದಾರೆ.
ದೇವಾಲಯದ ಬಳಿ ಬಸವೇಶ್ವರ ಮಠ ಸ್ಥಾಪಿಸಿ ಗುರೂಜಿಯಾಗಿರುವ ಅರ್ಚಕ. ಮಠದ ಸ್ವಾಮೀಜಿಯಾದ ಬಳಿಕ ಮೈ ತುಂಬಾ ಬಂಗಾರದ ಓಡವೆ ಧರಿಸುತ್ತಿರುವ ಸ್ವಾಮೀಜಿ. ಒಡವೆಗಳ ಜೊತೆಗೆ ಕೊರಳಿಗೆ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಧನಂಜಯ ಗುರೂಜಿಯ ಫೋಟೊ ವೈರಲ್ ಆಗಿದೆ. ಇದರ ಬೆನ್ನಲ್ಲೇ ಇದೀಗ ಅರಣ್ಯ ಇಲಾಖೆ ಅಧಿಕಾರಿ, ಬಿದನಗೆರೆ ದೇವಾಲಯಕ್ಕೆ ತರೆಳಿ ಹುಲಿ ಉಗುರಿನ ಬಗ್ಗೆ ತನಿಖೆ ನಡೆಸಿದ್ದಾರೆ. ಕುಣಿಗಲ್ ವಲಯ ಅರಣ್ಯಾಧಿಕಾರಿ ಜಗದೀಶ್ ಅವರು ಧನಂಜಯಸ್ವಾಮಿಯ ಚಿನ್ನದ ಚೈನ್ ಗಳನ್ನ ಪರಿಶೀಲನೆ ನಡೆಸಿದ್ದಾರೆ.