PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಲಕ್ಷ್ಮಣ್ ಗೌಡರಿಗೆ ಮತ ನೀಡಲು ಮನವಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕೊಡಗು > ಲಕ್ಷ್ಮಣ್ ಗೌಡರಿಗೆ ಮತ ನೀಡಲು ಮನವಿ
ಕೊಡಗು

ಲಕ್ಷ್ಮಣ್ ಗೌಡರಿಗೆ ಮತ ನೀಡಲು ಮನವಿ

ಪ್ರತಿನಿಧಿ
Last updated: April 21, 2024 6:52 pm
ಪ್ರತಿನಿಧಿ
Published April 21, 2024
Share
SHARE

ಕಾಂಗ್ರೆಸ್ ಪರ ಸಿಐಟಿಯು ಪ್ರಚಾರ ಸಭೆ

ಮಡಿಕೇರಿ: ಕಳೆದ 10 ವರ್ಷಗಳ ಕಾಲ ಜನವಿರೋಧಿ ನೀತಿಗಳನ್ನು ಅನುಸರಿಸಿ ಬಡ ವರ್ಗವನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಸಿಐಟಿಯು ಕಾರ್ಮಿಕ ಸಂಘಟನೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಗೆ ಮತ ನೀಡುವಂತೆ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮನವಿ ಮಾಡಿದರು.
ಸಿದ್ದಾಪುರ ಪಟ್ಟಣದಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ವತಿಯಿಂದ ನಡೆದ ಕಾಂಗ್ರೆಸ್ ಪರ ಬಹಿರಂಗ ಪ್ರಚಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಬಡವರು, ಕಾರ್ಮಿಕರು, ಕೃಷಿ ಕಾರ್ಮಿಕರು, ರೈತಾಪಿ ವರ್ಗ ಹಾಗೂ ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಕಾರ್ಮಿಕರಿಗೆ ನೀಡಲಾಗುತ್ತಿರುವ ಕನಿಷ್ಠ ವೇತನವನ್ನು ಏರಿಕೆ ಮಾಡಿ ಎಂದು ನಾವುಗಳು ಹೋರಾಟ ನಡೆಸುತ್ತಿದ್ದರೆ, ಕೇಂದ್ರ ಸರ್ಕಾರದ ಈಗ ಇರುವ ಅಲ್ಪ ಮೊತ್ತದ ವೇತನವನ್ನೇ ಕಡಿಮೆ ಮಾಡುವ ಚಿಂತನೆ ನಡೆಸಿದೆ. ಕಾರ್ಮಿಕ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಕಾರ್ಮಿಕರಿಗೆ ಅನ್ಯಾಯ ಮಾಡಲಾಗಿದೆ. ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಕಾಡುತ್ತಿದೆ. ಕಡು ಬಡವರ ಹಸಿವಿನ ಪ್ರಶ್ನೆ, ಒಕ್ಕೂಟ ವ್ಯವಸ್ಥೆಯ ರಕ್ಷಣೆೆ, ರೈತರ ಆತ್ಮಹತ್ಯೆ, ವನ್ಯಜೀವಿಗಳ ದಾಳಿ ಈ ಸಮಸ್ಯೆಗಳಿಗೆ ಇದುವರೆಗೆ ಪರಿಹಾರ ದೊರೆತ್ತಿಲ್ಲ.ರಾಷ್ಟ್ರೀಯ ಆರ್ಥಿಕ ಶಕ್ತಿಗೆ ಪೂರಕವಾಗಿದ್ದ ಸರಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಬಂಡವಾಳಶಾಹಿಗಳನ್ನು ರಕ್ಷಿಸುವ ಪ್ರಯತ್ನಗಳನ್ನಷ್ಟೆ ಬಿಜೆಪಿ ನೇತೃತ್ವದ ಸರಕಾರ ಮಾಡಿದೆ ಎಂದು ಆರೋಪಿಸಿದರು. ಕಳೆದ 10 ವರ್ಷಗಳ ಕಾಲ ಮೈಸೂರು- ಕೊಡಗು ಲೋಕಸಭಾ ಕೇತ್ರದ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರು ಕೊಡಗಿನ ಬಗ್ಗೆ ಯಾವುದೇ ಕಾಳಜಿ ತೋರಿಲ್ಲ. ವನ್ಯಜೀವಿಗಳ ದಾಳಿಯನ್ನು ನಿಯಂತ್ರಿಸಿಲ್ಲ, ಡಾ.ಕಸ್ತೂರಿ ರಂಗನ್ ವರದಿಯ ಗೊಂದಲವನ್ನು ನಿವಾರಿಸಿಲ್ಲ, ರೈಲು ಮಾರ್ಗ ತರಲಿಲ್ಲ ಮತ್ತು ಮೂಲ ಸಮಸ್ಯೆಗಳಿಗೆ ಸ್ಪಂದಿಸಿಲ್ಲವೆಂದು ಟೀಕಿಸಿದರು.

ಕೇಂದ್ರ ಸರಕಾರದ ಆಡಳಿತ ವೈಫಲ್ಯಕ್ಕೆ ತಕ್ಕ ಉತ್ತರ ನೀಡಲು ಈ ಲೋಕಸಭಾ ಚುನಾವಣೆ ಸಕಾಲವಾಗಿದ್ದು, ಎಲ್ಲರೂ ಇಂಡಿಯಾ ಒಕ್ಕೂಟದ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಪಿ.ಆರ್.ಭರತ್ ಕರೆ ನೀಡಿದರು.

- ಜಾಹೀರಾತು -

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು, ಜಿಲ್ಲಾ ಖಜಾಂಚಿ ಎನ್.ಡಿ.ಕುಟ್ಟಪ್ಪನ್ ಮಾತನಾಡಿದರು.

ಉಪ ಕಾರ್ಯದರ್ಶಿಗಳಾದ ಶಾಜಿ ರಮೇಶ್, ಕೆ.ಕೆ.ಹರಿದಾಸ್, ಪ್ರಾಂತ ರೈತ ಸಂಘದ ರಾಜ್ಯ ಕಾರ್ಯದರ್ಶಿ ಎನ್.ಎಲ್.ಭರತ್ ರಾಜ್ ಮಂಡ್ಯ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕೊಡಗು

ವಯಸ್ಕರಲ್ಲೇ ಹೆಚ್ಚಾದ ಮಾದಕ ವಸ್ತು ಒಲವು

June 25, 2024
ಕೊಡಗು

ಎನ್‌ಡಿಎ ಸರ್ಕಾರದಿಂದ ಪರಿಶಿಷ್ಟರ ನಿರ್ಲಕ್ಷ್ಯ

June 13, 2024
ಕೊಡಗು

ಚಲಿಸುತ್ತಿದ್ದ ಟ್ರ್ಯಾಕ್ಟರ್ ನಿಂದ ಬಿದ್ದು ದುರ್ಮರಣ

August 4, 2024
ಕೊಡಗು

ಅಧಿಕಾರಿಗಳು ತೊಂದರೆ ಕೊಟ್ಟರೆ ದೂರು ದಾಖಲಿಸಿ

June 13, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?