ಕೆ.ಎಂ.ದೊಡ್ಡಿ: ಶ್ರೀಮತಿ ಪದ್ಮ ಜಿ.ಮಾದೇಗೌಡ ಪ್ರತಿಷ್ಠಾನದ ವತಿಯಿಂದ ಮಾ.೧೯ ರಂದು ೧೦ನೇ ವರ್ಷದ ಶ್ರೀಮತಿ ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ತಿಳಿಸಿದರು.
ಭಾರತೀ ಎಜುಕೇಷನ್ ಟ್ರಸ್ಟ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳವಾರ ಬೆಳಗ್ಗೆ ೧೦ ಗಂಟೆಗೆ ಇಲ್ಲಿಯ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದ್ದು ಪದ್ಮ ಜಿ.ಮಾದೇಗೌಡ ಅವರ ಹೆಸರಿನಲ್ಲಿ ಕಳೆದ ೯ ವರ್ಷಗಳಿಂದ ಮಹಿಳಾ ಸಾಧಕಿಯರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದೇವೆ ಎಂದು ವಿವರಿಸಿದರು.
ಪ್ರತಿಷ್ಠಾನದ ವತಿಯಿಂದ ರಾಜ್ಯ ಮಟ್ಟದಲ್ಲಿ ಸೇವೆ ಸಲ್ಲಿಸಿದ ೯ ಮಂದಿ ಸಾಧಕಿಯರನ್ನುಗುರುತಿಸಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು ಅದೇ ರೀತಿ ಮೈಸೂರಿನ ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವಿಶ್ರಾಂತ ಉಪನಿರ್ದೇಶಕಿ ಡಾ.ಟಿ.ಸಿ.ಪೂರ್ಣಿಮ ಅವರನ್ನು ಅಭಿನಂದಿಸಲು ಮುಂದಾಗಿದ್ದೆವೆ ಎಂದರು.
ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಮಂಡ್ಯದ ಮಿಹಿಳಾ ಸರಕಾರಿ ಕಾಲೇಜಿನ ನಿವೃತ್ತ ಆಂಗ್ಲ ಭಾಷಾ ಪ್ರಾಧ್ಯಾಪಕಿ ಶ್ರೀದೇವಿ ವಹಿಸಲಿದ್ದು, ಮಂಡ್ಯದ ಸಾಹಿತಿ ಡಾ,ಶುಭಶ್ರೀ ಪ್ರಸಾದ್ ಅವರು ಭಾರತೀ ಕಾಲೆಜಿನ ಕನ್ನಡ ವಿಭಾಗದ ಉಪನ್ಯಾಸಕಿ ಮಮತನಾಗ್ ಅವರ ಪ್ರಮುಖ ಧಾರ್ಮಿಕ ಹಬ್ಬಗಳು ಕಥರಿ ಬಿಡುಗಡೆ ಮಾಡಿ ಪ್ರಧಾನ ಭಾಷಣ ಮಾಡಲಿದ್ದು, ಪದ್ಮ ಜಿ.ಮಾದೇಗೌಡ, ಭಾರತೀ ಎಜುಕೇಷನ್ ಟ್ರಸ್ಟ್ ಚರ್ಮನ್ , ಎಂಎಲ್ಸಿ ಮಧು ಜಿ.ಮಾದೇಗೌಡ, ಕಾರ್ಯನಿರ್ವಾಹಕ ಟ್ರಸ್ಟಿ ಆಶಯ್ ಮಧು ಮಾದೇಗೌಡ ಉಪಸ್ಥಿತರಿರಲಿದ್ದರೆ ಎಂದು ಹೇಳಿದರು.
ಭಾರತೀಕಾಲೇಜಿನ ಪ್ರಾಂಶುಪಾಲ ಡಾ.ಪಿ.ನಾಗೇಂದ್ರ, ಕಾರ್ಯಕ್ರಮದ ಸಂಚಾಲಕರಾದ ಮಮತನಾಗ್, ಶೃತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
![](https://www.prathinidhi.net/wp-content/uploads/2022/10/Prathinidhi_Digital-2.jpg)
Leave a comment