ಮೈಸೂರು: ಒಕ್ಕಲಿಗರ ವಿರುದ್ದ ಅವಹೇಳನಕಾರಿ ಹೇಳಿಕೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೊ. ಭಗವಾನ್ ಅವರನ್ನು ಗಡಿಪಾರು ಮಾಡುವಂತೆ ಬಿಜೆಪಿ ಒತ್ತಾಯಿ ಪತ್ರಿಕಾ ಪ್ರಕಟಣೆ ನೀಡಿದೆ. ಈ ಕೂಡಲೇ ಅವರನ್ನು ಗಡಿಪಾರು ಮಾಡಬೇಕು. ಜೊತೆಗೆ ಅವರಿಗೆ ನೀಡಿರುವ ಪೊಲೀಸ್ ಭದ್ರತೆ ವಾಪಸ್ಸು ಪಡೆಯಬೇಕು. ಇದರಿಂದ 1.5 ಲಕ್ಷ ತೆರಿಗೆ ಹಣ ಉಳಿಯುತ್ತದೆ ಎಂದು ಒತ್ತಾಯಿಸಿದ್ದಾರೆ. ಭಗವಾನ್ ತಮ್ಮ ಹೇಳಿಕೆಯಿಂದ ಜಾತಿ-ಧರ್ಮಗಳ ಮಧ್ಯೆ ವೈಷಮ್ಯ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
