ಕೋಲಾರ, ಜನವರಿ 9, 2025 : ತಮಿಳುನಾಡಿನ ರಾಣಿಪೇಟೆ ಬಳಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಭೀಕರ ರಸ್ತೆ ಅಪಘಾತದಲ್ಲಿ ಕೋಲಾರದ ನಾಲ್ವರು ಮೃತಪಟ್ಟಿದ್ದಾರೆ. ಓಂ ಶಕ್ತಿ ದರ್ಶನ ಪಡೆದು 50 ಮಂದಿ ಭಕ್ತರು ಕೋಲಾರಕ್ಕೆ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ನಲ್ಲೂರು ಗ್ರಾಮದ ಸರಸ್ವತಮ್ಮ ಸ್ಥಿತಿ ಗಂಭೀರವಾಗಿದೆ.
ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್ಆರ್ಟಿಸಿ ಬಸ್ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಹೋಗಿ ವಾಪಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು.
ಬುಧವಾರ ರಾತ್ರಿ ತಮಿಳುನಾಡಿನ ರಾಣಿಪೇಟೆ ಬಳಿ ಕೆಎಸ್ಆರ್ಟಿಸಿ ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
