ಶಿವಮೊಗ್ಗ : ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಧಮ್ಕಿ ಹಾಕುವ ಕೆಲಸ ನಡೆಯುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಆರೋಪಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದ ಅವರು, ತಾಯಿ ಹಾಲು ಕುಡಿದು ಬೆಳೆದಿರುವ ಕಾರ್ಯಕರ್ತರು ಯಾರೂ ಹೆದರಬೇಕಿಲ್ಲ ಎಂದು ಹೇಳಿದರು. ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಪ್ರಪಂಚದಲ್ಲೇ ದೊಡ್ಡ ರಾಜಕೀಯ ಪಕ್ಷವಾಗಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಪಕ್ಷ ಹೊರಹೊಮ್ಮಲು ಪೇಜ್ ಪ್ರಮುಖರೇ ಕಾರಣ ಎಂದರು.
ಶಿವಮೊಗ್ಗ ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಪೇಜ್ ಪ್ರಮುಖರ ಸಮಾವೇಶವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟಿಸಿದರು. ಸಮಾವೇಶದಲ್ಲಿ ಶಾಸಕ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್, ಜೆಡಿಎಸ್ ಮುಖಂಡರು ಭಾಗಿಯಾಗಿದರು.
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷ ಇಡೀ ಪ್ರಪಂಚದಲ್ಲಿ ದೊಡ್ಡ ರಾಜಕೀಯ ಪಕ್ಷವಾಗಿದೆ. ಪಕ್ಷ ಇಷ್ಟು ದೊಡ್ಡ ಮಟ್ಟದಲ್ಲಿ ಹೊರ ಹೊಮ್ಮಲು ಪೇಜ್ ಪ್ರಮುಖರು ಕಾರಣ. ಪ್ರಪಂಚದಲ್ಲಿ ನರೇಂದ್ರ ಮೋದಿ ನೋಡಲು ಜನರು ಹುಚ್ಚೆಂದು ಕಣಿಯುತ್ತಿದ್ದಾರೆ. ಮೋದಿ ಅವರ ಮಾತು ಕೇಳಬೇಕು ಅಂತಾ ಕಾತುರದಿಂದ ಇರುತ್ತಾರೆ. ಅಂತಹ ಪ್ರಧಾನಮಂತ್ರಿ ಅವರು ಶಿವಮೊಗ್ಗ ಜಿಲ್ಲೆಗೆ ಕಳೆದ ಒಂದೂವರೆ ವರ್ಷದಲ್ಲಿ ಮೂರು ಬಾರಿ ಬಂದಿದ್ದರು ಎಂದು ರಾಘವೇಂದ್ರ ಹೇಳಿದರು.