PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಾಮರಾಜನಗರ ಲೋಕಸಭಾ ಚುನಾವಣೆ 2024 ಫಲಿತಾಂಶ: ಮೊದಲ ಬಾರಿ ಸಂಸತ್ ಪ್ರವೇಶಿಸುವ ಅದೃಷ್ಟ ಯಾರಿಗೆ?
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಚಾಮರಾಜನಗರ ಲೋಕಸಭಾ ಚುನಾವಣೆ 2024 ಫಲಿತಾಂಶ: ಮೊದಲ ಬಾರಿ ಸಂಸತ್ ಪ್ರವೇಶಿಸುವ ಅದೃಷ್ಟ ಯಾರಿಗೆ?
ಚಾಮರಾಜನಗರಚುನಾವಣೆಮುಖಪುಟ

ಚಾಮರಾಜನಗರ ಲೋಕಸಭಾ ಚುನಾವಣೆ 2024 ಫಲಿತಾಂಶ: ಮೊದಲ ಬಾರಿ ಸಂಸತ್ ಪ್ರವೇಶಿಸುವ ಅದೃಷ್ಟ ಯಾರಿಗೆ?

Prathinidhi News
Last updated: June 4, 2024 9:24 am
Prathinidhi News
Published June 4, 2024
Share
SHARE

ಚಾಮರಾಜನಗರ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿಯಿಂದ ಎಸ್‌. ಬಾಲರಾಜು ಸ್ಪರ್ಧಿಸಿದ್ದಾರೆ. ಕಾಂಗ್ರೆಸ್‌ನಿಂದ ಸಮಾಜ ಕಲ್ಯಾಣ ಖಾತೆ ಸಚಿವ ಎಚ್‌.ಸಿ. ಮಹದೇವಪ್ಪ ಅವರ ಮಗ ಸುನೀಲ್‌ ಬೋಸ್‌ ಸ್ಪರ್ಧಿಸಿದ್ದಾರೆ. ಇವರಿಬ್ಬರ ನಡುವೆ ತೀವ್ರ ಪೈಪೋಟಿ ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಲೆಯಿಂದ ಬಾಲರಾಜು ಈ ಬಾರಿ ಗೆಲುವಿನ ನಗು ಬೀರಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ತಂದೆಯ ವರ್ಚಸ್ಸಿನಿಂದಾಗಿ ಸುನೀಲ್ ಬೋಸ್ ಕೂಡ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಅಲ್ಲದೆ, ಚಾಮರಾಜನಗರ ಕ್ಷೇತ್ರದ ಒಟ್ಟು 7 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರೇ ಇರುವುದರಿಂದ ಕಾಂಗ್ರೆಸ್​ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಯ ಸಾಧಿಸುವ ಸಾಧ್ಯತೆಯೂ ಇಲ್ಲದಿಲ್ಲ.

ಈ ಬಾರಿ ಎಸ್ ಬಾಲರಾಜು ಅಥವಾ ಸುನೀಲ್ ಬೋಸ್ ಇವರಿಬ್ಬರಲ್ಲಿ ಯಾರೇ ಗೆದ್ದರೂ ಅವರು ಮೊದಲ ಬಾರಿಗೆ ಸಂಸದ್ ಪ್ರವೇಶಿಸಲಿದ್ದಾರೆ. 2019ರ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಭಾರೀ ಸ್ಪರ್ಧೆ ನಡೆದಿತ್ತು. ಕಾಂಗ್ರೆಸ್‌ನ ಆರ್‌. ಧ್ರುವನಾರಾಯಣ ಅವರ ಎದುರು ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್‌ ಕೇವಲ 1,800 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು.

ಚಾಮರಾಜನಗರ ಕ್ಷೇತ್ರ ಕಾಂಗ್ರೆಸ್ ಪಾಲಿಗೆ ಬಹಳ ಮಹತ್ವದ ಕ್ಷೇತ್ರವಾಗಿದೆ. ಇದಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಿಎಂ ಸಿದ್ದರಾಮಯ್ಯನವರ ಸ್ವಕ್ಷೇತ್ರವಾದ ವರುಣ ಇದೇ ಚಾಮರಾಜನಗರ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ, ಇದು ಸಿದ್ದರಾಮಯ್ಯನವರ ಪಾಲಿಗೆ ಪ್ರತಿಷ್ಠೆ ಪ್ರಶ್ನೆಯಾಗಿದೆ. ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಅವರು ಭಾರೀ ಕಸರತ್ತು ನಡೆಸಿದ್ದರು.

1962ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರ ರಚನೆಯಾಯಿತು. ಅಂದಿನಿಂದಲೂ ಇದು ಕಾಂಗ್ರೆಸ್​ನ ಭದ್ರಕೋಟೆಯೆಂದರೂ ತಪ್ಪಾಗಲಾರದು. ಆದರೆ, ಕಳೆದ ಬಾರಿ ಕೆಲವೇ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಗೆಲುವು ಕಂಡಿದ್ದರು.

- ಜಾಹೀರಾತು -

ಚಾಮರಾಜನಗರ ಕ್ಷೇತ್ರದಲ್ಲಿ ಒಟ್ಟು 14 ಮಂದಿ ಅಂತಿಮ ಕಣದಲ್ಲಿದ್ದಾರೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿಯಿದೆ. ವೀರಶೈವ, ಲಿಂಗಾಯತ ಹಾಗೂ ದಲಿತರ ಮತಗಳು ನಿರ್ಣಾಯಕವಾಗಿರುವ ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಕಡೆಗೆ ಒಲವು ಹೆಚ್ಚಾಗಿದೆ. ಆದರೆ, ಹಾಲಿ ಸಂಸದರು ಬಿಜೆಪಿಯವರಾದ್ದರಿಂದ ಬಿಜೆಪಿ ಕಾರ್ಯಕರ್ತರು ಮತ್ತೊಮ್ಮೆ ಇಲ್ಲಿ ಕಮಲವನ್ನು ಅರಳಿಸಲು ಶ್ರಮ ವಹಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯಮುಖಪುಟರಾಜಕೀಯ

ಬಿಜೆಪಿಯಲ್ಲಿನ ಬಣ ರಾಜಕೀಯ ವಿಚಾರವಾಗಿ ಪ್ರತಿಕ್ರಿಯಿಸಲು ರೆಬಲ್‌ ಲೇಡಿ ನಕಾರ

December 3, 2024
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಕೆಂಚಲಗೂಡು ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

September 13, 2025
ಚುನಾವಣೆಮಂಡ್ಯಮುಖಪುಟರಾಜಕೀಯ

ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟ

March 30, 2024
ಮುಖಪುಟರಾಜಕೀಯ

ಕಾಂಗ್ರೆಸ್‌ ಅಧಿವೇಶನಕ್ಕೆ ನೂರರ ಸಂಭ್ರಮ: ಬೆಳಗಾವಿಗೆ ದೌಡಾಯಿಸುತ್ತಿರುವ ಕಾಂಗ್ರೆಸ್‌ ಪಾಳಯದ ಅಗ್ರ ನಾಯಕರು!

December 26, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?