ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ, ಸುಪ್ರೀಂಕೋರ್ಟ್ ತೀರ್ಪು ಗಾಯದ ಮೇಲೆ ಬರೆ ಎಳೆದಂತಾಗಿದೆ. ತಮಿಳುನಾಡು ಕೇಳುವುದಕ್ಕಿಂತ ಮೊದಲೇ ಕರ್ನಾಟಕ ನೀರು ಬಿಟ್ಟಿದೆ. ತಮಿಳುನಾಡಿಗೆ ರಾಜ್ಯ ಸರ್ಕಾರ ಯಾರ ಭಯದಿಂದ ನೀರು ಬಿಟ್ಟಿದೆ. ರಾಜ್ಯ ಸರ್ಕಾರಕ್ಕೆ ಡಿಎಂಕೆ ಬೆದರಿಕೆ ಹಾಕಿರಬಹುದು. ನಿಮ್ಮ I.N.D.I.Aದ ಭಾಗ ಆಗಬೇಕೆಂದರೆ ನೀರು ಬಿಡಿ ಎಂದಿರಬಹುದು ಅಥವಾ ನಿಮ್ಮ ಹೈಕಮಾಂಡ್ ನೀರು ಬಿಡಲು ಸೂಚನೆ ನೀಡಿರಬಹುದು. ನೀರು ಬಿಟ್ಟು ಸಭೆ ಕರೆಯುವ ಹೊಸ ಸಂಪ್ರದಾಯ ಶುರು ಮಾಡಿದ್ದೀರಿ ಎಂದರು.
