ಬೆಂಗಳೂರು : ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇಡೀ ರಾಜ್ಯವೇ ಮಂಡ್ಯ ಲೋಕಸಭಾ ಕ್ಷೇತ್ರದ ಚಿತ್ತ ಹರಿಸಿತ್ತು. ಬಿಜೆಪಿ ಬೆಂಬಲಿತ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಪೈಪೋಟಿ ನಡೆದು ಸುಮಲತಾ ಅವರು ಗೆದ್ದು ಬೀಗಿದ್ದರು. ಇದೀಗ ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ ಕ್ಷೇತ್ರ ಸುದ್ದು ಮಾಡುತ್ತಿದೆ. ಒಂದೆಡೆ, ಟಿಕೆಟ್ ಕೈತಪ್ಪುವ ಸುಳಿಸುವ ಪಡೆದಿರುವ ಸುಮಲತಾ ಅವರು ಪಕ್ಷೇತರವಾಗಿ ಕಣಕ್ಕಿಳಿಯಬೇಕು ಎಂದು ಬೆಂಬಲಿಗರು ಒತ್ತಡ ಹೇರುತ್ತಿದ್ದರೆ, ಇನ್ನೊಂದೆಡೆ, ಹೆಚ್ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂದು ಮಂಡ್ಯ ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಆದರೆ, ಕುಮಾರಸ್ವಾಮಿ ಸ್ಪರ್ಧೆಗೆ ಚನ್ನಪಟ್ಟಣ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಇದೇ ವಿಚಾರವಾಗಿ ಕಾರ್ಯಕರ್ತರ ಜೊತೆ ಸಭೆಗಳನ್ನು ನಡೆಸಿದ್ದ ಕುಮಾರಸ್ವಾಮಿ ಅವರು ಇಂದು ಅಂತಿಮ ಸುತ್ತಿನ ಸಭೆ ನಡೆಸಿದ್ದಾರೆ. ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಚನ್ನಪಟ್ಟಣ ಮುಖಂಡರ ಸಭೆಯಲ್ಲಿ, ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗದಂತೆ ಮುಖಂಡರು ಪಟ್ಟು ಹಿಡಿದಿದ್ದಾರೆ. ಅದಾಗ್ಯೂ, ಮಂಡ್ಯದಲ್ಲಿ ಪರಿಸ್ಥಿತಿ ಬೇರೆ ಇದೆ. ನಾನು ಮಂಡ್ಯದಿಂದ ಸ್ಪರ್ಧೆ ಮಾಡಲು ಸಾಕಷ್ಟು ಒತ್ತಡ ಇದೆ. ಹೀಗಾಗಿ ಯಾರು ಬೇಸರ ಮಾಡಿಕೊಳ್ಳಬೇಡಿ ಎಂದು ಮನವೊಲಿಕೆ ಮಾಡಿದ ಕುಮಾರಸ್ವಾಮಿ, ಸಂಜೆಯೊಳಗೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ.