ಹೆಚ್ಡಿ ದೇವೇಗೌಡರಿಗೆ ಇನ್ನೊಮ್ಮೆ ಕೈಮುಗಿದು ಪ್ರಾರ್ಥನೆ ಮಾಡ್ತೀನಿ. ಬಿಜೆಪಿ ಜೊತೆಗಿನ ಮೈತ್ರಿ ವಿಚಾರವನ್ನು ಮರುಪರಿಶೀಲನೆ ಮಾಡಿ ಎಂದು ಬೆಂಗಳೂರಿನಲ್ಲಿ ಮಾಜಿ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ. ಏಕೆಂದರೆ ಜಿಲ್ಲಾಧ್ಯಕ್ಷರು, ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಯಾರನ್ನೂ ನಾನು ಬಹಿರಂಗವಾಗಿ ಕರೆಯುತ್ತಿಲ್ಲ. ಲೋಕಸಭೆ ಚುನಾವಣೆಗೆ ಸಮಯವಿದೆ, ಮಾತಾಡೋಣ ಎಂದಿದ್ದೇನೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿಶ್ ಶಾಗೆ ಗೌರವ ಕೋಡೋಣ. ಅಕ್ಟೋಬರ್ 26ರಂದು ಮುಂಬೈಗೆ ಹೋಗುತ್ತಿದ್ದೇನೆ. ಬೇರೆ ಪಕ್ಷದ ನಾಯಕರನ್ನ ಭೇಟಿ ಮಾಡ್ತೇನೆ, ಒಂದೇ ಕಡೆ ಕೂರಲ್ಲ. ನಾನು ತ್ರಿಲೋಕ ಸಂಚಾರಿ ಎಂದು ಮಾಜಿ ಎಂಎಲ್ಸಿ ಇಬ್ರಾಹಿಂ ತಿಳಿಸಿದರು.
