ಮೈಸೂರು: ಹಾಸನದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಸ್ವಾಗತ ಕೋರಿದ್ದು, ಪೊಲೀಸ್ ಇಲಾಖೆ ವತಿಯಿಂದ ಗೌರವ ವಂದನೆಯನ್ನು ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ. ಈ ಸಂದರ್ಭ ಸಿಎಂ ಸಿದ್ದರಾಮಯ್ಯಗೆ ಶಾಸಕ ಕೆ.ಹರೀಶ್ ಗೌಡ, ಡಿ.ರವಿಶಂಕರ್, ಪುಷ್ಪಾ ಅಮರನಾಥ್, ಮಾಜಿ ಸಂಸದ ಕಾಗಲವಾಡಿ ಶಿವಣ್, ಸಾಥ್ ನೀಡಿದ್ದಾರೆ.
![](https://www.prathinidhi.net/wp-content/uploads/2024/03/cm-siddaramaiah-2.webp)