ಮೈಸೂರು: ಅಹಿಂದ ನಾಯಕ ಸಿದ್ದರಾಮಯ್ಯಗೆ ಬಿ.ವೈ. ವಿಜಯೇಂದ್ರ ಸೆಡ್ಡು ಹೊಡೆದಿದ್ದು, ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಕಾಯಕ ಸಮಾಜಗಳ ಸಮಾವೇಶ ನಡೆಸಿದ್ದಾರೆ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾಯಕ ಸಮಾಜಗಳ ಮತ ಕ್ರೋಢೀಕರಣಕ್ಕೆ ವಿಜಯೇಂದ್ರ ಮುಂದಾಗಿದ್ದು, ಸಮಾವೇಶ ಉದ್ಘಾಟನೆ ಮಾಡಿ ಮಾತನಾಡಿದ್ದಾರೆ. ಸಮಾವೇಶದಲ್ಲಿ ಮಾಜಿ ಸಚಿವ ಸಿ ಎಚ್ ವಿಜಯಶಂಕರ್, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ ರಾಜೇಂದ್ರ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ, ಸುರೇಶ್ ಬಾಬು ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.
![](https://www.prathinidhi.net/wp-content/uploads/2024/04/vhlkf-fkdfl.jpg)