ದೇವನಹಳ್ಳಿ :ಬಡವರಿಗೆ ಬದುಕು ಕಟ್ಟಿಕೊಟ್ಟ ಪಕ್ಷ ಕಾಂಗ್ರೆಸ್ ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬಿದ ಪಕ್ಷ ಕಾಂಗ್ರೆಸ್. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದೆಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಸರ್ಕಾರ ಅಸ್ತಿತ್ವಕ್ಕೆ ಬಂದಂತೆ ಕೇಂದ್ರಲ್ಲೂ ಗ್ಯಾರಂಟಿ ಸರ್ಕಾರ ರಚನೆಯಾಗಲಿದೆ ಎಂದು ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಬ್ಲಾಕ್ ಅಧ್ಯಕ್ಷ ಮತ್ತು ಮುಖಂಡರಾದ ಶಿವಾಜಿ ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕುಂದಾಣ ಹೋಬಳಿಯ ಕೊಯಿರಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಮನಗೊಂಡನಹಳ್ಳಿಯ ಪ್ರತಿ ಮನೆಮನೆಗೂ ತೆರಳಿ ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಮತಯಾಚಿಸಿದರು.
ದೇಶದಲ್ಲಿ ಬೆಲೆ ಏರಿಕೆ ಮತ್ತು ನಿರುದ್ಯೋಗ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಮತದಾರರು ಕಾಂಗ್ರೆಸ್ ಗೆ ಬೆಂಬಲ ನೀಡಬೇಕು. ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾಂಗ್ರೆಸ್ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಈಗಾಗಲೇ ರಾಜ್ಯದ ಜನತೆಯ ಮನೆಬಾಗಿಲಿಗೆ ಗೃಹಲಕ್ಷ್ಮಿ ಕಾಲಿಟ್ಟಿದ್ದು ಮುಂದೆ ಮಹಾಲಕ್ಷ್ಮಿ ಕೂಡ ಬರಲಿದ್ದಾಳೆ ಎಂದರು.
ಖಾದಿ ಬೋರ್ಡ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿದರು. ವಿಶ್ವನಾಥಪುರದ ವಿಎಸ್ಎಸ್ ನಿರ್ದೇಶಕ ಸುಬ್ಬೆಗೌಡ ಎಂ ಆರ್ ಜ್ಯೋತಿಪುರ ಹಾಲಿನ ಡೈರಿ ಅಧ್ಯಕ್ಷ ರಾಮಾಂಜಿನಪ್ಪ ಮಾಜಿ ಸದಸ್ಯರಾದ ಆನಂದ್ ಮುಖಂಡರುಗಳಾದ ಕೆಸಿಎಂ ಮುನೇಗೌಡ, ಬಿಂದು ಬಸವರಾಜ್ ,ಅರ್ಜುನ್, ಜಗದೀಶ್ ,ರಾಹುಲ್, ಕುಮಾರ್ ,ಆಶಾ ,ಸಂಪಂಗಿ ಗೌಡ ಸೇರಿದಂತೆ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಮತ್ತಿತರರು ಇದ್ದರು.