PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: 11,371 ಮತ ಹೆಚ್ಚಿಸಿಕೊಂಡ ಕಾಂಗ್ರೆಸ್‌
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > 11,371 ಮತ ಹೆಚ್ಚಿಸಿಕೊಂಡ ಕಾಂಗ್ರೆಸ್‌
ಸಮಗ್ರ

11,371 ಮತ ಹೆಚ್ಚಿಸಿಕೊಂಡ ಕಾಂಗ್ರೆಸ್‌

ಪ್ರತಿನಿಧಿ
Last updated: June 5, 2024 7:59 pm
ಪ್ರತಿನಿಧಿ
Published June 5, 2024
Share
SHARE

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಿರೀಕ್ಷೆಯನ್ನು ತಲುಪದ ‘ಕೈ’

ಹರ್ಷ ಪಿ ದೇವನಹಳ್ಳಿ

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಿದ್ದ ಮತಕ್ಕಿಂತ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರವಾರು 11,371 ಮತಗಳನ್ನು ಕಾಂಗ್ರೆಸ್‌ ಹೆಚ್ಚಳ ಮಾಡಿಕೊಂಡಿದೆ.

ವಿಧಾನ ಸಭಾ ಚುನಾವಣೆಯಲ್ಲಿ ಕೆ.ಎಚ್‌.ಮುನಿಯಪ್ಪ 73,058 ಮತಗಳನ್ನು ಪಡೆಯುವ ಮೂಲಕ ವಿಜಯೋತ್ಸವ ಆಚರಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ರಕ್ಷಾ ರಾಮಯ್ಯರ ಪರ 84,429 ಮತಗಳನ್ನು ಕಾಂಗ್ರೆಸ್‌ ಸೆಳೆದಿದೆ.

- ಜಾಹೀರಾತು -

ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್‌ನ ನಿಸರ್ಗ ನಾರಾಯಣಸ್ವಾಮಿ 68,427 ಮತಗಳು ಹಾಗೂ ಬಿಜೆಪಿಯ ಪಿಳ್ಳ ಮುನಿಶಾಮಪ್ಪ 34,404 ಮತಗಳನ್ನು ಪಡೆದಿದ್ದರೂ, ಇವರಿಬ್ಬರಿರು ಪಡೆದಿದ್ದ ಒಟ್ಟು ಮತಗಳು 1,02,231 ಲೆಕ್ಕಾಚಾರವಿದ್ದರೂ, ಈ ಗುರಿಯನ್ನು ಲೋಕಸಭಾ ಚುನಾವಣೆಯಲ್ಲಿ ಮುಟ್ಟಲು ಸಾಧ್ಯವಾಗಿಲ್ಲ.

ರಕ್ಷಾ ರಾಮಯ್ಯರನ್ನು ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತ ಕೊಡಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ರಾಜಕೀಯ ತಂತ್ರಗಾರಿಕೆ ಫಲವಾಗಿ 11,371 ಮತಗಳನ್ನಷ್ಟೇ ದೇವನಹಳ್ಳಿಯಲ್ಲಿ ಪಡೆಯಲು ಸಾಧ್ಯವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೂವರು ಕಾಂಗ್ರೆಸ್‌ನ ಶಾಸಕರಿದ್ದರೂ ನಿರೀಕ್ಷಿತ ಮಟ್ಟದಲ್ಲಿ ರಕ್ಷಾ ರಾಮಯ್ಯರಿಗೆ ಮತದಾರರು ಬೆಂಬಲಿಸಿದಂತೆ ಕಾಣುತ್ತಿಲ್ಲ.

ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಪಂಚ ಗ್ಯಾರೆಂಟಿಗಳು ಕೈಹಿಡಿಯಲಿವೆ ಎಂಬ ನಂಬಿಕೆಯಲ್ಲಿದ್ದ ಕಾಂಗ್ರೆಸ್‌ ಮುಖಂಡರಿಗೆ ಸಮೀಕ್ಷೆಗಳು ತಲೆಕೆಳಗಾಗಿದೆ. ಚುನಾವಣೆ ವೇಳೆಗೆ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಗೃಹ ಲಕ್ಷ್ಮೀ ಹಣವೂ ಬಂದಿದ್ದು, ಮತಗಳಾಗಿ ಪರಿವರ್ತನೆ ಆಗುತ್ತದೆ ಎಂಬ ಮಾತು ಸುಳ್ಳಾಗಿದೆ.

ಆಹಾರ ಸಚಿವ ಕೆ.ಎಚ್‌.ಮುನಿಯಪ್ಪರ ತವರು ಕ್ಷೇತ್ರ ದೇವನಹಳ್ಳಿಯಲ್ಲಿ ರಾಜಕೀಯ ಲೆಕ್ಕಾಚಾರದ ನಡುವೆಯೂ ಜೆಡಿಎಸ್‌- ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರಿಗೆ 5,231 ಮತಗಳ ಮುನ್ನಡೆ ದೊರೆತಿದೆ. ನೆಲಮಂಗಲದಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಬಿಜೆಪಿ ಪಕ್ಷಕ್ಕೆ 33,255 ಮತಗಳು ಮುನ್ನಡೆ ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ.

ಬಾಕ್ಸ್ 1

ಹೊಸಕೋಟೆಯಲ್ಲಿ ಕಾಂಗ್ರೆಸ್‌ ಮತಗಳು ಕ್ಷೀಣ: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹೊಸಕೋಟೆಯಲ್ಲಿ ಶಾಸಕ ಶರತ್‌ ಬಚ್ಚೇಗೌಡ ಅವರು, ಪ್ರಬಲ ಪ್ರತಿಸ್ಪರ್ಧಿ ಎಂಟಿಬಿ ನಾಗರಾಜ್‌ ವಿರುದ್ಧ 5075 ಮತಗಳ ಅಂತರದಿಂದ ವಿಜಯ ಸಾಧಿಸಿದ್ದರೂ, ಅದರೆ ಲೋಕಸಭಾ ಚುನಾವಣೆಯಲ್ಲಿ ಈ ಅಂತರದ ಮತಗಳು ಕಡಿತವಾಗಿದೆ. ಸುಧಾಕರ್‌ ವಿರುದ್ಧ ರಕ್ಷಾ ರಾಮಯ್ಯರಿಗೆ ಕೇವಲ 2885 ಮತಗಳ ಲೀಡ್‌ ಮಾತ್ರವೇ ಹೊಸಕೋಟೆಯ ಕಾಂಗ್ರೆಸ್‌ ಕಲಿಗಳು ನೀಡುವಲ್ಲಿ ಸಫಲರಾಗಿದ್ದಾರೆ.

 

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷವೂ ವಿಧಾನ ಸಭಾ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತ ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪಕ್ಷ ಸಂಘಟನೆಯಲ್ಲಿ ನಿರತನಾಗುವೆ-

ಕೆ.ಎಚ್.ಮುನಿಯಪ್ಪ, ಆಹಾರ ಸಚಿವ

ಪೋಟೋ

ದೇವನಹಳ್ಳಿಯ ನಾಗಾರ್ಜುನ ಎಂಜಿನಿಯರ್‌ ಕಾಲೇಜಿನಲ್ಲಿ ನಡೆದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಂತರ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಬೆಂಬಲಿಗರೊಂದಿಗೆ ಸಂಭ್ರಮಾಚರಣೆ ಮಾಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

8ನೇ ತರಗತಿ ಮಕ್ಕಳಿಗೆ ಮತ್ತೆ ಸೈಕಲ್‌ ಭಾಗ್ಯ: ಸಚಿವ ಮಧು ಬಂಗಾರಪ್ಪ

December 8, 2023
ಸಮಗ್ರ

ಡಿ.10 ರಂದು ಭಾರತ- ಪಾಕಿಸ್ತಾನ ನಡುವೆ ಕ್ರಿಕೆಟ್ ಕದನ

December 6, 2023
ಸಮಗ್ರ

ದೇಶದಲ್ಲಿ 20 ಕೊರೊನಾ ಜೆಎನ್​1 ಪ್ರಕರಣ, ಕರ್ನಾಟಕದಲ್ಲಿ ಒಂದು ಸಾವು

December 20, 2023
ಚುನಾವಣೆಮುಖಪುಟರಾಜಕೀಯಸಮಗ್ರ

ಗ್ಯಾರಂಟಿ ಯೋಜನೆಗಳನ್ನು ಯಾವ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ

April 27, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?