ಪ್ರತಿನಿಧಿ ವರದಿ ಕೆ.ಆರ್.ನಗರ
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಬಸವೇಶ್ವರ ಬಡಾವಣೆಯ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಸ್.ಮಹೇಶ್ ಅಧಿಕಾರ ಸ್ವೀಕರಿಸಿದರು.
ಪಟ್ಟಣದ 7ನೇ ರಸ್ತೆಯಲ್ಲಿರುವ ನಗರ ಯೋಜನ ಪ್ರಾಧಿಕಾರದ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕರಾಗಿ ಸೈಯದ್ ಜಾಬೀರ್, ಸರಿತಾ ಜವರಪ್ಪ ಮತ್ತು ಕೆ.ಎನ್.ಪ್ರಸನ್ನಕುಮಾರ್ ಅವರು ಅಧ್ಯಕ್ಷರೊಂದಿಗೆ ಅಧಿಕಾರ ಸ್ವೀಕಾರ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಕೆ.ಎಸ್.ಮಹೇಶ್, ಪಕ್ಷದ ವರಿಷ್ಠರು ನನಗೆ ನೀಡಿರುವ ಅಧಿಕಾರವನ್ನು ಸದ್ಬಳಕೆ ಮಾಡಿಕೊಂಡು ಪಟ್ಟಣದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಗರ ಯೋಜನಾ ಪ್ರಾಧಿಕಾರದ ಅಧಿಕಾರದ ವ್ಯಾಪ್ತಿಗೆ ಬರುವ ಕೆಲಸಗಳನ್ನು ಸರ್ಕಾರದ ನಿಯಮಾನುಸಾರ ಮಾಡಿ ಶಾಸಕ ಡಿ.ರವಿಶಂಕರ್ ಅವರ ಮಾರ್ಗದರ್ಶನದಲ್ಲಿ ಪಟ್ಟಣದ ಸಮಗ್ರ ಏಳಿಗೆಗೆ ದುಡಿಯುವುದಾಗಿ ಹೇಳಿದರು.
ನವನಗರ ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಮಾಜಿ ನಿರ್ದೇಶಕ ಹೆಬ್ಬಾಳು ವೇಣುಗೋಪಾಲ್, ಪುರಸಭಾ ಸದಸ್ಯ ಕೆ.ಜಿ.ಸುಬ್ರಮಣ್ಯ, ನಟರಾಜ್, ಶಿವುನಾಯಕ್, ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಯನ ನಾಯಕ್, ಮಾಜಿ ಅಧ್ಯಕ್ಷ ವೈ.ಎಸ್.ಕುಮಾರ್, ಕೆ.ಆರ್.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲತಾ, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರಾಣಿ, ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಸಿಡಿಸಿ ಉಪಾಧ್ಯಕ್ಷೆ ಸುನೀತಾರಮೇಶ್, ಮುಖಂಡ ಎಂ.ಎ.ನಾಗೇಂದ್ರ, ರವಿಪೂಜಾರಿ, ಕೆಂಚಿಮಂಜು ಮತ್ತಿತರರು ನೂತನ ಅಧ್ಯಕ್ಷರು ಮತ್ತು ನಿರ್ದೇಶಕರನ್ನು ಅಭಿನಂದಿಸಿದರು.
16 ಕೆಆರ್ಎನ್-1:- ಕೆ.ಆರ್.ನಗರದ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಸ್.ಮಹೇಶ್, ನಿರ್ದೇಶಕರಾಗಿ ಸೈಯದ್ ಜಾಬೀರ್, ಸರಿತಾ ಜವರಪ್ಪ ಮತ್ತು ಕೆ.ಎನ್.ಪ್ರಸನ್ನಕುಮಾರ್ ಅಧಿಕಾರ ಸ್ವೀಕರಿಸಿದರು. ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಯನ ನಾಯಕ್, ಮಾಜಿ ಅಧ್ಯಕ್ಷ ವೈ.ಎಸ್.ಕುಮಾರ್, ಲತಾ, ರಾಣಿ, ಸುನೀತಾರಮೇಶ್, ಕೆಂಚಿ ಮಂಜು ಇದ್ದರು.
