ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಜಿಂದಾಬಾದ್ ಎನ್ನುವವರು ಅಪ್ಪನಿಗೆ ಹುಟ್ಟಿದವರಲ್ಲ ಎಂದು ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ವಿವಾದಾತ್ಮಕ ಹೇಳಿಕೆ ನೀಡಿದರು. ಶುಕ್ರವಾರ ಮಧ್ಯಾಹ್ನ 12 ಗಂಟೆ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಜಿಂದಾಬಾದ್, ಇಂಡಿಯಾ ಜಿಂದಾಬಾದ್ ಹೇಳಬೇಕು, ಭಾರತ ಮುಖ್ಯ ಎಂದರು. ಸಂವಿಧಾನ ಮುಟ್ಟಿದರೆ ರಕ್ತಪಾತವಾಗುತ್ತದೆ. ನಾವು ಸುಮ್ಮನೇ ಕೂರಲ್ಲ, ನಾವು ಸಂವಿಧಾನ ರಕ್ಷಿಸುವ ಸೈನಿಕರು. ಯಾವುದೇ ಸರ್ಕಾರ ಬರಲಿ, ಗುಲಾಮಗಿರಿ ಒಪ್ಪಿಕೊಳ್ಳಲ್ಲ. ನಾನು 35 ವರ್ಷ ಕಾಲ ಪತ್ರಿಕೋದ್ಯಮ ಶಿಕ್ಷಣದಲ್ಲಿ ಸೇವೆ ಸಲ್ಲಿಸಿ ನಿವೃತ್ತನಾಗಿದ್ದೇನೆ. ನಾನು ನನ್ನ ಜನರಿಗಾಗಿ ಕೆಲಸ ಮಾಡುತ್ತೇನೆ. ನನ್ನ ಕುಟುಂಬಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು ಬಳಿಕ ಮೋದಿ ವಿರುದ್ದ ಹರಿಹಾಯುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ಈ ವೇಳೆ ವಿಚಾರವಾದಿ ಮಾಯಿಗೌಡ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ ಸೇರಿದಂತೆ ಹಲವರಿದ್ದರು.