PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಘೋಷಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಘೋಷಣೆ
ಸಮಗ್ರ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಘೋಷಣೆ

ಪ್ರತಿನಿಧಿ
Last updated: March 28, 2024 7:36 pm
ಪ್ರತಿನಿಧಿ
Published March 28, 2024
Share
SHARE

ಪ್ರತಿನಿಧಿ ವರದಿ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಿಪಿಎಂ ಅಭ್ಯರ್ಥಿಯನ್ನಾಗಿ ಎಂ.ಪಿ.ಮುನಿವೆಂಕಟಪ್ಪ ಅವರನ್ನು ಘೋಷಣೆ ಮಾಡಿದ ಪಕ್ಷದ ಕಾರ್ಯದರ್ಶಿ ಯು.ಬಸವರಾಜ್, ರಾಜ್ಯದಲ್ಲಿ ೨೮ ಕ್ಷೇತ್ರಗಳ ಪೈಕಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮಾತ್ರ ಪಕ್ಷದ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋಮುವಾದಿ ಪಕ್ಷವಾಗಿರುವ ಬಿಜೆಪಿ ಹಾಗೂ ಅದರ ಮೈತ್ರಿ ಪಕ್ಷ ಜೆಡಿಎಸ್ ಅನ್ನು ಸೋಲಿಸಲು ಪಕ್ಷವು ತೀರ್ಮಾನಿಸಿದೆ. ಕೇಂದ್ರ ಸಮಿತಿ ಅನುಮತಿಯ ಮೇರೆಗೆ ಕ್ಷೇತ್ರದ ಪಕ್ಷದ ಅಭ್ಯರ್ಥಿಯನ್ನಾಗಿ ಎಂ.ಪಿ.ಮುನಿವೆಂಕಟಪ್ಪರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬರುವುದಕ್ಕೆ ಮುನ್ನ ಜನತೆ ನೀಡಿದ್ದ ಆಶ್ವಾಸನೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸಂವಿಧಾನ ಆಧಾರ ಸ್ಥಂಭಗಳ ಮೇಲೆ ದಾಳಿ ನಡೆಸಿ ಸರ್ವಾಧಿಕಾರದ ಕಡೆಗೆ ಆಡಳಿತವನ್ನು ಕೊಂಡೊಯ್ಯಲಾಗುತ್ತಿದೆ. ಇದು ಆರ್ಥಿಕ ಸಾರ್ವಭೌಮತ್ವದ ಮೇಲೆ ದುಷ್ಪರಿಣಾಮ ಬೀರುವ ಜತೆಗೆ ಜಾತ್ಯಾತೀತ ಪ್ರಜಾಪ್ರಭುತ್ವದ ಧಕ್ಕೆ ತರುತ್ತಿದೆ ಎಂದು ಕಿಡಿಕಾರಿದರು.

- ಜಾಹೀರಾತು -

ಕಳೆದ ೧೦ ವರ್ಷಗಳಲ್ಲಿ ರೈತರ ಆತ್ಮಹತ್ಯೆಯ ಪ್ರಮಾಣವು ಹೆಚ್ಚಾಗುತ್ತಿದ್ದು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಅಲ್ಲದೆ ದಲಿತರು, ಮಹಿಳೆಯರು ಹಾಗೂ ಅಲ್ಪಂಸಂಖ್ಯಾತರ ಮೇಲೆ ನಿರಂತರ ದಬ್ಬಾಳಿಕೆ, ಕೊಲೆಗಳು ನಡೆಯುತ್ತಿದೆ. ಇದರಿಂದ ದೇಶವು ಸಂಕಷ್ಟದ ಸ್ಥಿತಿಗೆ ತಲುಪಿದ್ದು, ಇದನ್ನು ತಪ್ಪಿಸಲು ಜನರಪರ ಧ್ವನಿ ಎತ್ತುವ ಸಿಪಿಎಂ ಅಭ್ಯರ್ಥಿಯನ್ನು ಗೆಲ್ಲಿಸಿ, ಸಮಸ್ಯೆಗಳಿಂದ ಮುಕ್ತಿ ಪಡೆಯಬೇಕೆಂದು ಹೇಳಿದರು.

ಅಭ್ಯರ್ಥಿ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ಜನರ ಸಮಸ್ಯೆಗಳನ್ನು ಗಾಳಿಗೆ ತೂರಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಟಿಕೆಟ್‌ಗಾಗಿ ಅನಾರೋಗ್ಯಕರ ರಾಜಕಾರಣದಲ್ಲಿ ನಿರತರಾಗಿರುವುದು ದುರಂತವಾಗಿದ್ದು, ಜನತೆ ಮೋದಿಯ ಹೆಸರಿನಲ್ಲಿ ಪದೇ ಪದೇ ಮೋಸಹೋಗದೆ ಶ್ರಮಿಜೀವಿಗಳ ಪರ ನಿರಂತರ ಧ್ವನಿ ಎತ್ತುವ ಜನರ ಕಾವಲು ನಾಯಿಯಂತೆ ಕಾರ್ಯನಿರ್ವಹಿಸುವ ಸಿಪಿಎಂಗೆ ಬೆಂಬಲಿಸಲು ಕೋರಿದರು.

ಶ್ರೀರಾಮರೆಡ್ಡಿ, ಜಯರಾಮರೆಡ್ಡಿ, ಸಿದ್ದಗಂಗಪ್ಪ, ಕೆ.ನಾಗರಾಜ್, ಜಿ.ಸಿ.ಶ್ರೀನಿವಾಸ್, ಬಿ.ಎನ್.ಮುನಿಕೃಷ್ಣಪ್ಪ, ಚನ್ನರಾಯಪ್ಪ, ಟಿ.ವೆಂಕಟರಾಜು, ಆದಿನಾರಾಯಣಸ್ವಾಮಿ, ಲಕ್ಷ್ಮೀ ನಾರಾಯಣರೆಡ್ಡಿ, ಮುನಿಯಪ್ಪ ಇದ್ದರು.

ಬಾಕ್ಸ್
ನ್ಯಾಯಾಂಗ ತನಿಖೆಗೆ ಒತ್ತಾಯ: ಬಿಜೆಪಿ ಭಾರಿ ಮೊತ್ತದ ಚುನಾವಣಾ ಬಾಂಡ್‌ಗಳನ್ನು ಪಡೆದಿರುವುದು ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಬರಹಿರಂಗವಾಗಿರುವುದು ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ಅಧಿಕಾರಕ್ಕೆ ಬಂದ ಬಿಜೆಪಿ ಅಸಲಿಮುಖ ಅನಾವರಣಗೊಂಡಿದ್ದು, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಬಲವಂತದಿಂದ ಮಾಡಿಕೊಂಡು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿರುವ ದೊಡ್ಡ ಹಗರಣವಾಗಿದೆ. ಆದ್ದರಿಂದ ಸುಪ್ರೀಂಕೋರ್ಟ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಒಳಪಡಿಸಬೇಕೆಂದು ಯು.ಬಸವರಾಜ್ ಒತ್ತಾಯಿಸಿದರು. ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ಕುರಿತು ಧ್ವನಿ ಎತ್ತುವವರನ್ನು ಮಣಿಸಲು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಸೋಲಿನ ಭೀತಿಯಿಂದ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಮಾಡಿರುವುದು ಖಂಡನೀಯ. ಈ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಕಮಿಷನ್ ಆಸೆಗೆ 5 ಲಕ್ಷ ರೂ. ಕಳೆದುಕೊಂಡ ಗೃಹಿಣಿ

April 2, 2024
ಸಮಗ್ರ

ಅರಾಭಿಕೊತ್ತನೂರು ಗ್ರಾಪಂ ಸಾಮಾನ್ಯ ಸಭೆ ಕೋರಂ ಫೈಟ್

June 12, 2024
ಸಮಗ್ರ

ಆಹಾರದ ಕೊರತೆ ನೀಗಿಸಿದ ಬಾಬೂಜಿ

April 5, 2024
ಸಮಗ್ರ

ಮುರಾರ್ಜಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

May 15, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?