PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹಾಲು ಉತ್ಪಾದಕರಿಗೆ ಸರಕಾರದ ಪೋತ್ಸಾಹ ಧನ ಬಿಡುಗಡೆಗೆ ಒತ್ತಾಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಹಾಲು ಉತ್ಪಾದಕರಿಗೆ ಸರಕಾರದ ಪೋತ್ಸಾಹ ಧನ ಬಿಡುಗಡೆಗೆ ಒತ್ತಾಯ
ಸಮಗ್ರ

ಹಾಲು ಉತ್ಪಾದಕರಿಗೆ ಸರಕಾರದ ಪೋತ್ಸಾಹ ಧನ ಬಿಡುಗಡೆಗೆ ಒತ್ತಾಯ

ಪ್ರತಿನಿಧಿ
Last updated: May 8, 2024 4:14 pm
ಪ್ರತಿನಿಧಿ
Published May 7, 2024
Share
SHARE
ಕೋಲಾರ; ರೈತರ ಹೈನೋದ್ಯಮದ ಕ್ಷೀರಭಾಗ್ಯ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿ ಬರದಿಂದ ತತ್ತರಿಸಿರುವ ರೈತರ ರಕ್ಷಣೆಗೆ ಸಹಕಾರ ಸಚಿವರು ನಿಲ್ಲಬೇಕೆಂದು ರೈತ ಸಂಘದಿಮನದ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಗೋಪಾಲಮೂರ್ತಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ರಾಜ್ಯದಲ್ಲಿ ಒಟ್ಟು ೧೪ ಹಾಲು ಒಕ್ಕೂಟಗಳಿದ್ದು, ಇದರಲ್ಲಿ ೩೫ ಸಾವಿರ ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ. ಈ ಸಂಘಗಳಲ್ಲಿ ೨೪ ಲಕ್ಷ ಮಂದಿ ನೊಂದಾಯಿತ ಹಾಲು ಉತ್ಪಾದಕರಿದ್ದಾರೆ. ಇವರಲ್ಲಿ ನಿತ್ಯ ೯ ಲಕ್ಷ ಮಂದಿ ರೈತರು ಹಾಲು ಸರಬರಾಜು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವು ಹೈನುಗಾರಿಕೆ ನಡೆಸುವ ರೈತರಿಗೆ ಅನುಕೂಲವಾಗಿಲಿ ಎಂಬ ಕಾರಣದಿಂದ ಕ್ಷೀರದಾರೆ ಹೆಸರಿನಲ್ಲಿ ಪ್ರತಿಯೊಬ್ಬ ರೈತರಿಗೆ ಲೀಟರ್‌ಗೆ ೫ ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದ್ದು, ಈಗ ಆ ಹಣವನ್ನು ಬಿಡುಗಡೆ ಮಾಡದೆ ಸಂಕಷ್ಟದಲ್ಲಿ ಹಾಲು ಉತ್ಪಾದಕರು ಸಿಲುಕಿದ್ದಾರೆಂದು ಸರ್ಕಾರಕ್ಕೆ ಮನವರಿಕೆ ಮಾಡಿದರು.
ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ರೈತರ ಹಾಲು ಉತ್ಪಾದನೆಯು ಪ್ರಸ್ತುತದಲ್ಲಿ ಕಷ್ಟಕರವಾಗಿದೆ. ಸ್ವಂತ ಮೇವಿನ ವ್ಯವಸ್ಥೆ ಇದ್ದಲ್ಲಿ ಪ್ರತಿ ಲೀಟರ್‌ಗೆ ೨೨ ರಿಂದ ೨೪ ರೂ. ವೆಚ್ಚವಾಗುತ್ತಿದೆ. ಮೇವು ಖರೀದಿಸಿದರೆ ೩೦ ರೂ ದಾಟುತ್ತದೆ. ಜೊತೆಗೆ ಖಾಸಗಿ ಅಂಗಡಿ ಮಾಲೀಕರು ಇಂಡೀ ಬೂಸವನ್ನು ತಮಗೆ ಇಷ್ಟಬಂದ ರೀತಿ ದುಬಾರಿ ಬೆಲೆಗೆ ಮಾರಾಟ ಮಾಡುವುದರಿಂದ ರೈತರಿಗೆ ತುಂಬಾ ತೊಂದರೆಯಲ್ಲಿದ್ದಾರೆ. ಸರ್ಕಾರ ಕೂಡಲೇ ಸ್ಪಂಧಿಸಬೇಕೆಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು, ಪ್ರೋತ್ಸಾಹ ಧನದ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು ರೈತರ ರಕ್ಷಣೆಗೆ ನಿಲ್ಲುವ ಭರವಸೆಯನ್ನು ನೀಡಿದರು.
ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ, ಕೇಶವ, ಶೈಲಜ, ಮುನಿರತ್ನಮ್ಮ, ವೆಂಕಟಮ್ಮ, ನಾಗರತ್ನ ಉಪಸ್ಥಿತರಿದ್ದರು.
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಉತ್ತರಾಖಂಡ ಸುರಂಗ ಕುಸಿದು 7 ದಿನ, ಇನ್ನೂ ಹೊರಬರದ 41 ಕಾರ್ಮಿಕರು!

November 19, 2023
ಸಮಗ್ರ

ಮೈತ್ರಿಯಿಂದ ರಾಜಕೀಯ ಪ್ರಜಾಪ್ರಭುತ್ವ ಅವನತಿಗೆ ರಹದಾರಿ

April 8, 2024
ಸಮಗ್ರ

ಪತ್ರಕರ್ತರ ಕಿತ್ತಾಟ: ದೂರು ದಾಖಲು

March 29, 2024
ಸಮಗ್ರ

ದೇಶದಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲಿ

March 28, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?