ಮೈಸೂರು: ದಸರಾ ಮಹೋತ್ಸವಕ್ಕೆ ರಿ ಲೂಕ್ ನೀಡಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ದಸರಾ ಉತ್ಸವದ ಥೀಮ್ ಚೇಂಚ್ ಆಗಬೇಕು. ಸ್ತಬ್ಧ ಚಿತ್ರಗಳ ಪ್ರದರ್ಶನದ ಬಗ್ಗೆ ಪ್ರತಿ ಜಿಲ್ಲೆಯಲ್ಲೂ ಸ್ಪರ್ಧೆ ನಡೆಯಬೇಕು. 400 ವರ್ಷಗಳ ಇತಿಹಾಸದ ದಸರಾ ಉತ್ಸವಕ್ಕೆ ನ್ಯೂ ಲೂಕ್ ಕೊಡಬೇಕಿದೆ. ಹೊಸ ರೀತಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ಕೊಡಬೇಕಿದೆ. ಮೈಸೂರಿಗೆ ಬರುವ ಅತಿಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ದಸರಾವನ್ನು ಮೈಸೂರಿಗೆ ಮಾತ್ರ ಸೀಮಿತಗೊಳಿಸಬಾರದು. ರಾಜ್ಯಮಟ್ಟದ ಅಧಿಕಾರಿಗಳನ್ನು ದಸರಾ ಉತ್ಸವಕ್ಕೆ ಬಳಸಿಕೊಳ್ಳಬೇಕು. ಮೈಸೂರು ದಸರಾ ಉತ್ಸವ ಯಶಸ್ವಿಗೆ ಎಲ್ಲರೂ ಶ್ರಮಿಸಿದ್ದಾರೆ. ಅಧಿಕಾರ ವರ್ಗ, ಪೊಲೀಸ್ ಇಲಾಖೆಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
