PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ
ಬೆಂಗಳೂರುಮುಖಪುಟ

ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ

Prathinidhi News
Last updated: May 13, 2024 10:12 am
Prathinidhi News
Published May 13, 2024
Share
SHARE

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾಗಿರುವ ವಿದ್ಯಾ ದೇಗುಲಗಳು ಮಕ್ಕಳ ಜೀವನದ ಜೊತೆ ಚಲ್ಲಾಟವಾಡುತ್ತಿವೆ. ಪೋಷಕರ ನೂರಾರು ಕನಸುಗಳು ನುಚ್ಚು ನೂರು ಮಾಡುತ್ತಿವೆ. ಸದ್ಯ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತಲೆ ಎತ್ತಿರುವ ಅನಧಿಕೃತ ಶಾಲೆಗಳು ಪೋಷಕರ ನಿದ್ದೆಗೆಡಸಿವೆ. ಕಾನೂನು ಕ್ರಮವಹಿಸಿ ಕಡಿವಾಣ ಹಾಕಬೇಕಿದ್ದ ಶಿಕ್ಷಣ ಇಲಾಖೆ ಕಣ್ಣಾಮುಚ್ಚಾಲೆ ಆಡುತ್ತಿದೆ.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಾರಂಭಕ್ಕೆ ಕೆಲ ದಿನಗಳಷ್ಟೇ ಬಾಕಿ ಇದೆ. ಇಷ್ಟಾದರೂ ಶಿಕ್ಷಣ ಇಲಾಖೆ ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸುತ್ತಿಲ್ಲ. ಕಳೆದ ತಿಂಗಳು ಅಂದರೆ ಏಪ್ರಿಲ್ 12 ರಂದು ಶಾಲಾ ಶಿಕ್ಷಣ ಇಲಾಖೆ ಅನಧಿಕೃತ ಶಾಲೆಗಳ ಪಟ್ಟಿಯ ವರದಿ ನೀಡುವಂತೆ ರಾಜ್ಯದ ಎಲ್ಲ ಬಿಇಎ ಹಾಗೂ ಡಿಡಿಪಿಐಗೆ ಸೂಚಿಸಿತ್ತು. ಅಲ್ಲದೆ ಏಪ್ರಿಲ್ 12 ರಿಂದ 19 ರವರೆಗೆ ಎಲ್ಲ ಆಕ್ಷೇಪಣೆ ಪರಶೀಲನೆ ನಡೆಸಿ ಎಪ್ರಿಲ್ 24 ರಂದು ಅಧಿಕೃತವಾಗಿ ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಸುವಂತೆ ಸೂಚಿಸಿತ್ತು.

ಏಪ್ರಿಲ್ 25 ರಂದು ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ಮುಖ್ಯಸ್ಥರು ತಮ್ಮ ಶಾಲೆಗಳ ಸೂಚನಾ ಫಲಕದಲ್ಲಿ ನೊಂದಣಿ ಹಾಗೂ ಮಾನ್ಯತೆ ನವೀಕರಣ ಪತ್ರ ಹಾಕುವಂತೆ ಹೇಳಿತ್ತು. ಈ ಸೂಚನೆ ಪಾಲಿಸದ ಶಾಲೆಗಳ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಿತ್ತು. ಆದರೆ ಶಿಕ್ಷಣ ಇಲಾಖೆ ಇದುವರೆಗೂ ಯಾವುದೇ ಶಾಲೆಗಳಿಗೆ ನೋಟಿಸ್ ನೀಡಿಲ್ಲ ಅನಧಿಕೃತ್ತ ಶಾಲೆಗಳ ಪಟ್ಟಿ ಪ್ರಕಟಿಸಿಲ್ಲ.

ಶಾಲೆಗಳ ದಾಖಲಾತಿ ಪ್ರಕ್ರಿಯೆ ಶುರುವಾಗಿದ್ದರೂ ಶಿಕ್ಷಣ ಇಲಾಖೆ ಮಾತ್ರ ಗಪ್ ಚುಪ್​ ಅಂತಿದ್ದು ಪೋಷಕರ ವಲಯದಲ್ಲಿ ವ್ಯಾಪಕ ವಿರೋಧ ಕೇಳಿ ಬಂದಿದೆ. ಕೂಡಲೇ ರಾಜ್ಯದ ಎಲ್ಲ ಜಿಲ್ಲೆಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟಿಸುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಆಯಾ ಜಿಲ್ಲೆಗಳ ಪ್ರಮುಖ ಪತ್ರಿಕೆಗಳಲ್ಲಿ ಈ ಪಟ್ಟಿ ಪ್ರಕಟವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದು ಒತ್ತಾಯಿಸಿದರೂ ಕೂಡ, ಶಿಕ್ಷಣ ಇಲಾಖೆ ಡೋಟ್ ಕೇರ್ ಅಂತಿದೆ.

- ಜಾಹೀರಾತು -

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್ ಅವರನ್ನು ಕೇಳಿದರೆ, ಪ್ರಕಟ ಮಾಡುತ್ತೇವೆ ಮಾಡುತ್ತೇವೆ ಅಂತ ಮೌನಕ್ಕೆ ಜಾರುತ್ತಾರೆ.

ಈಗಾಗಲೆ ಶೈಕ್ಷಣಿಕ ವರ್ಷಕ್ಕೆ ದಾಖಲಾತಿ ಶುರುವಾಗಿದೆ. ಅನೇಕ ಶಾಲೆಗಳು ಈ ವರ್ಷದ ದಾಖಲಾತಿ ಶುರು ಮಾಡಿವೆ. ಆದರೆ ಪೋಷಕರಿಗೆ ಮಾತ್ರ ಇದು ಬಿಗ್ ಸಮಸ್ಯೆಯಾಗಿದೆ. ಕೆಲವು ಅನಧಿಕೃತ ಶಾಲೆಗಳು ಕೂಡಾ ಶೈಕ್ಷಣಿಕ ವರ್ಷದ ದಾಖಲಾತಿ ಶುರು ಮಾಡಿಕೊಂಡಿವೆ. ಆದರೆ ಇದರ ಬಗ್ಗೆ ಪೋಷಕರಿಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲದಾಗಿದೆ. ಅನಧಿಕೃತ ಶಾಲೆಗಳ ಮುಂದೆ ಶಿಕ್ಷಣ ಇಲಾಖೆ ಯಾವುದೆ ಬೋರ್ಡ್ ಅಥವಾ ನೋಟಿಸ್ ಕೂಡ ಹಾಕಿಲ್ಲ.

ಇಲಾಖೆಯ ವೆಬ್ ಸೈಟ್ ಪತ್ರಿಕಾ ಪ್ರಕಟಣೆ ಕೂಡಾ ನೀಡುತ್ತಿಲ್ಲ. ಇದು ಟೆನ್ಷನ್​ಗೆ ಕಾರಣವಾಗಿದೆ. ಇಲಾಖೆ ಗರುತಿಸಿರುವ ಅನಧಿಕೃತ ಶಾಲೆ ಯಾವವು ಎಂಬ ಮಾಹಿತಿ ತಿಳಿಯದಾಗಿದೆ. ಇದರಿಂದ ಯಾವ ಶಾಲೆಗೆ ದಾಖಲಾತಿ ಮಾಡಿಸಬೇಕು? ಯಾವುದು ಅನಧಿಕೃತ ಶಾಲೆ ಅಂತಾ ತಿಳಿಯದೆ ಪರದಾಡುತ್ತಿದ್ದೇವೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಬೆಂಗಳೂರು ಸೇರಿದಂತೆ ಹಲವಡೆ ಪೋಷಕರಿಗೆ ಮಕಮಲ್ ಟೋಪಿ ಹಾಕಿರುವ ಅನಧಿಕೃತ ಶಾಲೆಗಳ ಕಳ್ಳಾಟದ ವಿರುದ್ಧ ಶಿಕ್ಷಣ ಇಲಾಖೆ ಇನ್ನಾದರೂ ಚಾಟಿ ಬಿಸಬೇಕಿದೆ. ಮುಂದಿನ ದಿನಗಳಲ್ಲಿ ಪೋಷಕರು ಮೋಸಹೋಗದಂತೆ ತಡೆಯಲು ಈ ಅನಧಿಕೃತ ಶಾಲೆಗಳ ಪಟ್ಟಿ ನೀಡಿ, ಅತಂಹ ಶಾಲೆಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣ: ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ

June 6, 2024
ಮುಖಪುಟಮೈಸೂರು ಗ್ರಾಮಾಂತರ

ನಂಜನಗೂಡಿನ ಗೋಳೂರು ಬಳಿ KSRTC ಬಸ್ ಗಳ ಮುಖಾಮುಖಿ ಡಿಕ್ಕಿ..!

May 20, 2025
ಕ್ರೀಡೆಮುಖಪುಟಮೈಸೂರು ನಗರ

ಆರ್‌ ಸಿ ಬಿ ಗೆಲ್ಲುವಂತೆ ಮೈಸೂರಿನ ಅಮೃತೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು

June 2, 2025
ಚುನಾವಣೆಮುಖಪುಟರಾಜಕೀಯ

ಚಿಕ್ಕಬಳ್ಳಾಪುರದಲ್ಲಿ ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ

April 17, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?