PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಲವ್ ಜಿಹಾದ್ ಕೊನೆಯಾಗಲಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಲವ್ ಜಿಹಾದ್ ಕೊನೆಯಾಗಲಿ
ಮಂಡ್ಯ

ಲವ್ ಜಿಹಾದ್ ಕೊನೆಯಾಗಲಿ

ಪ್ರತಿನಿಧಿ
Last updated: April 23, 2024 5:31 pm
ಪ್ರತಿನಿಧಿ
Published April 23, 2024
Share
SHARE

ಪ್ರತಿನಿಧಿ ವರದಿ ನಾಗಮಂಗಲ

ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆಗೈದ ಫಯಾಜ್ ಗೆ ಗಲ್ಲುಶಿಕ್ಷೆ ವಿಧಿಸುವ ಮೂಲಕ ಲವ್ ಜಿಹಾದ್ ಗೆ ಅಂತ್ಯ ಹಾಡಬೇಕು ಎಂದು ಮಂಡ್ಯ ಜಿಲ್ಲಾ ವಿಶ್ವ ಹಿಂದು ಪರಿಷತ್ ದುರ್ಗಾವಾಹಿನಿ ಮಾತೃಶಕ್ತಿ ಸಂಘಟನೆಯ ಉಷಾ ಜಗದೀಶ್ ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಹಾಗೂ ರಾಮನವಮಿ ದಿನ ಹಿಂದು ಯುವಕರ ಮೇಲಿನ ಹಲ್ಲೆಯನ್ನು ಖಂಡಿಸಿ, ಪಟ್ಟಣದ ಬಜರಂಗದಳ ವಿಶ್ವ ಹಿಂದು ಪರಿಷತ್ ಜಂಟಿಯಾಗಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಲವ್ ಜಿಹಾದ್ ಗೆ ಪ್ರಚೋದಿಸುವ ಮತ್ತು ಹಿಂದು ಹೆಣ್ಣುಮಕ್ಕಳನ್ನು ಅವರ ಕಾಮದಾಹದ ಸಾಧನಗಳಂತೆ ಬಳಸಿಕೊಳ್ಳುವ ಮತಾಂಧ ಮುಸ್ಲಿಂ ಮನಸುಗಳಿಗೆ ಭಯ‌ ಹುಟ್ಟುವಂತ ಕಾನೂನು ಬರಬೇಕು. ಮುಸ್ಲಿಂ ಸಮುದಾಯದ ಕೆಲವು ವಿಕೃತ ಮನಸುಗಳು ಲವ್ ಜಿಹಾದನ್ನು ಪ್ರೇರೇಪಿಸಿ ಪೋಷಿಸುತ್ತಿದೆ. ನಮ್ಮ ಹೆಣ್ಣು ಮಕ್ಕಳ ಭದ್ರತೆ ಹಾಗೂ ರಕ್ಷಣೆ ಆಗಬೇಕೆಂದರೆ ಕೊಲೆಗಡುಕ ಮತಾಂಧರಿಗೆ ಗಲ್ಲು‌ಶಿಕ್ಷೆ ಆಗಬೇಕು. ತೀವ್ರ ಸ್ವರೂಪದ ಕಾನೂನು‌ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

- ಜಾಹೀರಾತು -

ಹೆಣ್ಣು ಮಕ್ಕಳು ಕೂಡ ಕ್ಷುಲ್ಲಕ ಆಮಿಷಕ್ಕೆ, ಉಡುಗೊರೆಗಳಿಗೆ ಅವರ ನಯವಾದ ಮಾತಿನ ಮೋಡಿಗೆ ಸಿಲುಕಬಾರದು. ಅವರ ನಡವಳಿಕೆ ನಯವಂಚಕತನ ಗುರುತಿಸಿ‌ ಅವರನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು. ಅವರ ಪ್ರೀತಿ‌ ಕೊಲೆ ಮಾಡಿ‌ ಮೂಟೆ ಕಟ್ಟುವಂತದ್ದು, ಕತ್ತರಿಸಿ ರೆಫ್ರಿಜರೇಟರ್ ನಲ್ಲಿ ತುಂಬುವಂತದ್ದು, ಚೂರಿಯಿಂದ ಚುಚ್ಚಿ ಸಾಯಿಸುವಂತದ್ದು‌ ಅಂತಹ ಪ್ರೀತಿ ಬೇಕಿಲ್ಲ. ಸನಾತನ ಧರ್ಮದ ಹಿಂದು ನಾರಿ ಶಕ್ತಿ ಒಂದಾಗಬೇಕು. ತಾಯಂದಿರು ತಮ್ಮ ಹೆಣ್ಣುಮಕ್ಕಳ ಮೇಲಿನ ಜವಾಬ್ದಾರಿ ಹೆಚ್ಚಿಸಿಕೊಳ್ಳಬೇಕು ಎಂದರು.

ಟಿಬಿ ಬಡಾವಣೆಯ ಬಿಜಿಎಸ್ ವೃತ್ತದಿಂದ ಪಟ್ಟಣದ ಟಿ.ಮರಿಯಪ್ಪ ವೃತ್ತದವರೆಗೂ ಪ್ರತಿಭಟನಾಕಾರರು ಜಾಥಾ ನಡೆಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ‌ ಡಿ.ಕೆ.ಸುರೇಶ್ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯ ನಂತರ ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಪುಣ್ಯಕೋಟಿ ರಾಘವೇಂದ್ರ ಅವರು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ನಯೀಮುನ್ನಿಸಾ ಅವರಿಗೆ ಹಸ್ತಾಂತರಿಸಿದರು.

ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಬಸವರಾಜು, ಬಜರಂಗದಳ ವಿಭಾಗ ಸಂಯೋಜಕ್ ಚಿಕ್ಕಬಳ್ಳಿ ಬಾಲು, ಬೆಂಗಳೂರು ಮಾತೃಶಕ್ತಿಯ ಉಷಾ ಜಗದೀಶ್, ವಿಶ್ವ ಹಿಂದು ಪರಿಷತ್ ಜಿಲ್ಲಾ ಸಂಯೋಜಕ ಶಶಿಕಿರಣ್, ತಾಲೂಕು ಸಂಯೋಜಕ್ ಕಾರ್ತಿಕ್, ಪುರಸಭಾ ಸದಸ್ಯ ವಿಜಯ್ ಕುಮಾರ್ (ಪುಂಗ) ಸೇರಿದಂತೆ ಹಲವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯ

ವೆಂಕಟರಮಣೆಗೌಡ ಪರ ದರ್ಶನ್ ಪ್ರಚಾರ

April 23, 2024
ಮಂಡ್ಯ

ಪಾರದರ್ಶಕ ಚುನಾವಣೆ ನಡೆಸಲು ಸಕಲ ಸಿದ್ಧತೆ

March 18, 2024
ಮಂಡ್ಯ

ರೈತರೇ ಬೇಸಿಗೆ ಬೆಳೆ ಬೆಳೆಯಬೇಡಿ: ಸಚಿವ ಚಲುವರಾಯಸ್ವಾಮಿ ಮನವಿ

December 23, 2023
ಮಂಡ್ಯ

ಸಾರಸಗಟಾಗಿ ಕಾಂಗ್ರೆಸ್‌ ಬೆಂಬಲಿಸುವುದಿಲ್ಲ

April 4, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?