ಕನ್ನಡಪ್ರಭ ಪತ್ರಿಕೆಯಲ್ಲಿ ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷನಾಗಿ ಸೇವೆ ಸಲ್ಲಿದ್ದೇನೆ.
ಹಾಗೂ ಸಹಕಾರ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಕಳೆದ ಎರಡು ದಶಕಗಳಿಂದ ಸಲ್ಲಿಸಿರುವ ಸೇವೆಯ ಅನುಭವದೊಂದಿಗೆ ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದ್ದೇ ನನ್ನ ಪಾಲಿನ ವರ ಎಂದೇ ಭಾವಿಸಿದ್ದೇನೆ. ರೋಟರಿ ಸಂಸ್ಥೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಾ, ಕೊಡಗು ವಲಯ6ರ ಉಪರಾಜ್ಯಪಾಲನಾಗಿ ಕೆಲಸ ಮಾಡುವ ಮೂಲಕ ಜನರೊಂದಿಗೆ ಬೆರೆಯುವ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶ ಸಿಕ್ಕಿತ್ತು.
ಈಗ ನಾವು ವೃತ್ತಿಪರರೇ ಸೇರಿಕೊಂಡು ಪ್ರತಿನಿಧಿ ಪತ್ರಿಕೆಯನ್ನು ಆರಂಭಿಸಿ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಈಗ ಡಿಜಿಟಲ್ ವೇದಿಕೆಯ ಮೂಲಕ ಪ್ರತಿನಿಧಿಯ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದೇವೆ. ಓದುಗರು ನಮ್ಮೊಂದಿಗೆ ಎಂದಿನಂತೆ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.
ಧನ್ಯವಾದಗಳೊಂದಿಗೆ
ಧರ್ಮಾಪುರ ನಾರಾಯಣ್
ಕಾರ್ಯನಿರ್ವಾಹಕ ಸಂಪಾದಕರು
Be
In particular, the internet allows players from all over the world top muchbetter casinos to connect and play casino games.
aware of the time frame.