ಬೆಂಗಳೂರು, ಡಿಸೆಂಬರ್ 3, 2025 : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಒಂದಿಲ್ಲೊಂದು ಕಾರಣದಿಂದ ನಿತ್ಯ ಚರ್ಚೆಯಾಗುತ್ತಲೇ ಇದೆ. ಸದ್ಯ ಈ ಬಗ್ಗೆ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿದ್ದು, ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ ಎಂದು ಕೋಡಿಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
KR ಪೇಟೆಯ ಕಾರ್ಯಕ್ರಮದಲ್ಲಿ ಮಾತಾಡಿರೋ ಅವರು, ಶಿವನ ಮುಡಿಯ ಮೇಲಿರುವ ಮಲ್ಲಿಗೆಯು ಶಿವನ ಪಾದಕ್ಕೆ ಬೀಳಲೇಬೇಕು. ರಾಜ್ಯ ರಾಜಕಾರಣದ ಗೊಂದಲವು ಸಂಪೂರ್ಣವಾಗಿ ಬಗೆಹರಿಯಲಿದ್ದು, ಸುಖಾಂತ್ಯವಾಗಲಿದೆ. ಮಕರ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ ಎಂದು ಹೇಳಿದ್ದಾರೆ.
ಇನ್ನೂ, ರಾಷ್ಟ್ರ ರಾಜಕಾರಣದಲ್ಲಿಯೂ ಕೂಡ ಯುಗಾದಿ ನಂತರ ಸಮಸ್ಯೆಗಳು ಎದುರಾಗಲಿವೆ. ಇತ್ತೀಚಿಗೆ ನಡೆದ ಬಾಂಬ್ ಬ್ಲಾಸ್ಟ್ ನಂತಹ ಅಹಿತಕರ ಘಟನೆಗಳು ರಾಷ್ಟ್ರ ಮಟ್ಟದಲ್ಲಿ ನಡೆಯಲಿವೆ ಎಂದು ಕೋಡಿ ಶ್ರೀಗಳು ಎಚ್ಚರಿಸಿದ್ದಾರೆ.
