PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕೌಟುಂಬಿಕ ಕಲಹ: ಮದುವೆಯಾದ 6 ತಿಂಗಳಲ್ಲೇ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಕೌಟುಂಬಿಕ ಕಲಹ: ಮದುವೆಯಾದ 6 ತಿಂಗಳಲ್ಲೇ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ
ಚಾಮರಾಜನಗರ

ಕೌಟುಂಬಿಕ ಕಲಹ: ಮದುವೆಯಾದ 6 ತಿಂಗಳಲ್ಲೇ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ

Prathinidhi News
Last updated: November 28, 2023 9:57 am
Prathinidhi News
Published November 28, 2023
Share
SHARE

ಗುಂಡ್ಲುಪೇಟೆ : ಕೌಟುಂಬಿಕ ಕಲಹಕ್ಕೆ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಪಟ್ಟಣದ ದರ್ಶನ್ ಲೇಔಟ್‌ನಲ್ಲಿ ವಾಸವಿದ್ದ ಮಹೇಶ್ವರಿ ಆಲಿಯಾಸ್ ಸ್ವಾತಿ (25) ಆತ್ಮಹತ್ಯೆಗೆ ಶರಣಾದ ಮಹಿಳೆ.

ತಾಲೂಕಿನ ಬೇಗೂರು ಗ್ರಾಮದ ನಿವಾಸಿ ಚಾಲಕರಾಗಿರುವ ಸುರೇಶ್ ಹಾಗು ಮಂಜುಳರ ಪುತ್ರಿ ಮಹೇಶ್ವರಿ ಆಲಿಯಾಸ್ ಸ್ವಾತಿಯಾಗಿದ್ದು, ಈಕೆ ತಾಲೂಕಿನ ಹಂಗಳ ಗ್ರಾಮದ ವಿನಯ್ ಜೊತೆ ಕಳೆದ ಆರೇಳು ತಿಂಗಳ ಹಿಂದೆ ವಿವಾಹವಾಗಿತ್ತು.

ಸೋಮವಾರ ಮಧ್ಯಾಹ್ನ ಮಹೇಶ್ವರಿ ಆಲಿಯಾಸ್ ಸ್ವಾತಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.

- ಜಾಹೀರಾತು -

ಕುಟುಂಬಸ್ಥರ ಆಕ್ರಂದನ:

ಸ್ವಾತಿಯ ಸಾವಿನ ವಿಚಾರ ತಿಳಿದ ಪೋಷಕರು ಹಾಗೂ ಗ್ರಾಮದ ಮುಖಂಡರು ಧಾವಿಸಿದರು. ಬಳಿಕ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು.

ಮದುವೆಯಾದ ಆರೇಳು ತಿಂಗಳಿಂದಲೂ ಸ್ವಾತಿಯನ್ನು ತನ್ನ ತಂದೆಯ ಮನೆಗೆ (ಬೇಗೂರು) ಪತಿ ವಿನಯ್ ಕಳುಹಿಸಿರಲಿಲ್ಲ ಎನ್ನಲಾಗಿದೆ.

ಮೃತ ಸ್ವಾತಿಗೆ ಅತ್ತೆ ನಂದಿನಿ ಸಹ ಕಿರುಕುಳ ನೀಡುತ್ತಿದ್ದರು, ತಮ್ಮ ಮಗಳನ್ನ ನೇಣು ಹಾಕಿ ಸಾಯಿಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಮೃತ ಸ್ವಾತಿ ಸಾಯುವ ಮುನ್ನ ಕೆಲ ತಾಸಿನ‌ ಹಿಂದೆ ತಾಯಿ ಮಂಜುಳಾಗೆ ಮೊಬೈಲ್ ಮೂಲಕ ಕೆಲ ಕಾಲ ಮಾತನಾಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ವಿವರ ತಿಳಿದು ಬಂದಿಲ್ಲ.

ಡೆತ್‌ ನೋಟ್‌ ಪತ್ತೆ

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹೇಶ್ವರಿ ಆಲಿಯಾಸ್ ಸ್ವಾತಿ ಡೆತ್ ನೋಟ್ ಪತ್ತೆಯಾಗಿದೆ. ‘ಅಮ್ಮ ನಿನಗೆ ಒಳ್ಳೆ ಮಗಳಾಗಿ ಇರಲಿಲ್ಲ. ದಯವಿಟ್ಟು ಕ್ಷಮಿಸು’ ಎಂದು ಬರೆದುಕೊಂಡಿದ್ದಾರೆ.

‘ನನ್ನ ಸಾವಿಗೆ ಯಾರು ಕಾರಣ ಇಲ್ಲ. ದಯವಿಟ್ಟು ಎಲ್ಲರು ಕ್ಷಮಿಸಿ. ನಮ್ಮ ಮಮ್ಮಿ ತುಂಬಾ ಒಳ್ಳೆಯವರು. ಅಪ್ಪ ಮಮ್ಮಿ, ಅಪ್ಪು (ತಮ್ಮ) ಚೆನ್ನಾಗಿ ನೋಡಿಕೋ. ಅಪ್ಪು ನಿನಗೆ ಒಳ್ಳೆ ಅಕ್ಕ ಸಿಗಲಿಲ್ಲ ನಾನು. ಎಲ್ಲರು ಲೈಫ್‌ನಲ್ಲಿ ಚೆನ್ನಾಗಿ ಇರಬೇಕು, ಐ ಯಾಮ್ ಸಾರಿ’ ಎಂದು ಬರೆದಿರುವ ಪತ್ರ ಪೊಲೀಸರಿಗೆ ಸಿಕ್ಕಿದೆ.

ಎಸ್ಪಿ ಸಾಹು ಭೇಟಿ

ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಡಿಎಸ್ಪಿ ಲಕ್ಕಯ್ಯ, ತಹಸೀಲ್ದಾರ್ ಟಿ.ರಮೇಶ್ ಬಾಬು ಭೇಟಿ ನೀಡಿ ಪರಿಶೀಲಿಸಿದ್ದರು. ಗುಂಡ್ಲುಪೇಟೆ ಇನ್‌ಸ್ಪೆಕ್ಟರ್ ಎಸ್. ಪರಶಿವಮೂರ್ತಿ, ಸಬ್ಇನ್‌ಸ್ಪೆಕ್ಟರ್ ಸಾಹೇಬಗೌಡ ಸ್ಥಳದಲ್ಲಿದ್ದರು.

ಅಮ್ಮ, ಮಗ ವಶಕ್ಕೆ

ಗೃಹಿಣಿ ಆತ್ಮಹತ್ಯೆ ಘಟನೆಯ ಸಂಬಂಧ ಮೃತ ಸ್ವಾತಿ ಅತ್ತೆ ನಂದಿನಿ, ಪತಿ ವಿನಯ್ ಅನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮೃತನ ಸಂಬಂಧಿಕರು ವಿನಯ್ ಹಾಗೂ ನಂದಿನಿ ಮೇಲೆ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ಹಾಗೂ ಬೆರಳಚ್ಚು ತಜ್ಞರ ತಂಡ ಸಹ ಭೇಟಿ ನೀಡಿದ್ದು ವರದಿಯ ಬಳಿಕ ಸತ್ಯಾಂಶ ಹೊರ ಬರಲಿದೆ.

ಪದ್ಮಿನಿ ಸಾಹು,ಎಸ್ಪಿ

.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ಮಲೆ ಮಹದೇಶ್ವರನಿಗೆ ಬರೋಬ್ಬರಿ 85 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟ ಧಾರಣೆ

March 10, 2024
ಚಾಮರಾಜನಗರ

ಹರಳೆ ಗ್ರಾಮದ ಎಸ್ಸಿ ಬೀದಿಯಲ್ಲಿ ಜೆಜೆಎಂ ಅನುಷ್ಠಾನ ಅಪೂರ್ಣ

April 4, 2024
ಚಾಮರಾಜನಗರ

ಮೊಂಬತ್ತಿ ಮೆರವಣಿಗೆ ಮೂಲಕ ಮತದಾನದ ಅರಿವು

April 7, 2024
ಚಾಮರಾಜನಗರಮುಖಪುಟಮೈಸೂರು ಗ್ರಾಮಾಂತರ

ಹಕ್ಕಿ ಜ್ವರ ಭೀತಿ : ಕೇರಳ ಗಡಿ ಭಾಗ ಬಾವಲಿ ಚೆಕ್ ಪೋಸ್ಟ್ ನಲ್ಲಿ ಹೈ ಅಲರ್ಟ್ – ಅಧಿಕಾರಿಗಳ ಭೇಟಿ, ಪರಿಶೀಲನೆ ..!

March 6, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?