ಮೈಸೂರು, ಡಿಸೆಂಬರ್ 9, 2025 : ಲಲಿತಾ ಮಹಲ್ ರಸ್ತೆ, ಶ್ರೀ ತೂಗುದೀಪ್ ಶ್ರೀನಿವಾಸ್ ವೃತ್ತದಲ್ಲಿ ಶುಕ್ರವಾರ ವಿಶಿಷ್ಟ ವಾತಾವರಣ ನಿರ್ಮಾಣವಾಯಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಚಿತ್ರ ‘ಡೆವಿಲ್’ ಯಶಸ್ವಿಯಾಗಲಿ ಎಂಬ ಹಾರೈಕೆಯೊಂದಿಗೆ ಅಭಿಮಾನಿಗಳು ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸಿ, ಅದರ ಮುಂದೆ ತಾಯಿ ಚಾಮುಂಡೇಶ್ವರಿ ಭಾವಚಿತ್ರ ಇಟ್ಟು ವಿಶೇಷ ಪೂಜೆಯನ್ನು ನೆರವೇರಿಸಿದರು.

ಅಭಿಮಾನಿಗಳು ಕಟೌಟ್ ಮುಂದೆ ಕುಂಬಳಕಾಯಿಯಲ್ಲಿ ದೃಷ್ಟಿ ತೆಗೆದು, ಹಾಲು-ಅಕ್ಷತೆ ನೀಡಿ, ಚಿತ್ರಕ್ಕೆ ಅಡಚಣೆಗಳಿಲ್ಲದೆ ಯಶಸ್ವಿಯಾಗಲಿ, ತಂಡ ಸುಗಮ ಪಯಣ ಕಂಡು ಜನ ಮೆಚ್ಚುಗೆಯನ್ನು ಗಳಿಸಲಿ ಎಂಬ ಸಂಕಲ್ಪ ಶ್ಲಾಘನೀಯವಾಗಿತ್ತು.
ಹೂವಿನ ಹಾರಹಾಕಿ ಅಭಿಮಾನಿಗಳ ಘೋಷಣೆಯ ನಡುವೆ “ಡೆವಿಲ್ ಗೆಲ್ಲುವುದು ಪಕ್ಕ”, “ದರ್ಶನ್ ಮತ್ತೊಮ್ಮೆ ಸಿನಿಮಾ ರಂಗದಲ್ಲಿ ಗರ್ಜಿಸಲಿ” ಎಂಬ ನಾದಗಳು ಸಂಪೂರ್ಣ ವೃತ್ತದಲ್ಲಿ ಪ್ರತಿಧ್ವನಿಸಿದವು. ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರದ ಯಶಸ್ಸಿಗಾಗಿ ಮಾಡಿದ ಈ ಭಕ್ತಿಪರ ಕಾರ್ಯಕ್ರಮ ಅಭಿಮಾನಿಗಳ ನಿಷ್ಠೆ, ಭಾವ ಮತ್ತು ಸಿನಿಮಾ ಪ್ರೇಮಕ್ಕೆ ಉದಾಹರಣೆಯಾಯಿತು.
ಈ ಕಾರ್ಯಕ್ರಮದಲ್ಲಿ ಬನ್ನೂರು ಮಹೇಂದ್ರ ಸಿಂಗ್ ಕಾಳಪ್ಪ, ಜಿ. ರಾಘವೇಂದ್ರ, ರವಿಕುಮಾರ್, ಬನ್ನೂರು ಚಂದನ್, ಹರೀಶ್ ನಾಯ್ಡು, ಎಸ್.ಎನ್. ರಾಜೇಶ್, ರಾಕೇಶ್, ಮಣಿ ದಚ್ಚು, ನವೀನ್ ಮತ್ತು ಹಲವಾರು ಅಭಿಮಾನಿಗಳು ಉಪಸ್ಥಿತರಿದ್ದರು.
